![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿ ಗಾಂಧಿನಗರದಲ್ಲಿರುವ ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಮಾರಿಪೂಜೆ ಮಹೋತ್ಸವವು ಎ.26 ರಿಂದ ಆರಂಭಗೊಂಡು ಎ. 28 ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಎ.26 ರಂದು ಬೆಳಿಗ್ಗೆ ಗಣಪತಿ ಹೋಮ,ಮಧ್ಯಾಹ್ನ ಶುದ್ಧಿ ಕಲಶ ಬಳಿಕ ಅನ್ನಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು, ಭಂಡಾರ ಶುದ್ಧಿಗೊಳಿಸುವುದು ಬಳಿಕ ಭಂಡಾರವನ್ನು ಉತ್ಸವ ಬಯಲಿಗೆ ಕೊಂಡೊಯ್ಯುವ ಕಾರ್ಯಕ್ರಮ ನಡೆದು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಈ ಅನ್ನಸಂತರ್ಪಣೆಯು ವಿಶ್ವಂಭರ ಶೆಟ್ಟಿ ಮನೆಯವರು ಸೊರಕೆ ಹಾಗೂ ಬೆದ್ರುಮಾರು ಬಾಲಚಂದ್ರ ರೈ ಕೇಕನಾಜೆ ಇವರ ಸೇವಾರೂಪದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಶ್ರೀ ದೇವಿಯ ಗುಡಿ ಪ್ರತಿಷ್ಠಾಪಿಸುವ ಕಾರ್ಯಕ್ರಮ ನಡೆದು ಗುಳಿಗ, ಪಂಜುರ್ಲಿ, ಕಲ್ಲುರ್ಟಿ, ಶನಿಗುಳಿಗ, ಕಾಲಭೈರವ ದೈವಗಳ ದರ್ಶನ ಮತ್ತು ತಂಬಿಲ ಸೇವೆ ನಡೆಯಲಿದೆ. ಎ.27 ರಂದು ಸೂರ್ಯೋದಯಕ್ಕೆ ಮಾರಿ ಕಡಿಯುವ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಅಮ್ಮನವರ ದರ್ಶನ ಮತ್ತು ಇತರ ದೈವಗಳ ದರ್ಶನ ನಡೆದು ಮಧ್ಯಾಹ್ನ ಮಹಾಪೂಜೆ, ಹರಿಕೆ ಕಾಣಿಕೆ ಸ್ವೀಕಾರ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಈ ಅನ್ನಸಂತರ್ಪಣೆಯು ಓಲೆಮುಂಡೋವು ಮೋಹನ್ ರೈ ಇವರ ಸೇವಾರೂಪದಲ್ಲಿ ನಡೆಯಲಿದೆ. ಸಂಜೆ ಭಂಡಾರ ದೇವಾಲಯಕ್ಕೆ ಕೊಂಡೊಯ್ಯುವ ಕಾರ್ಯಕ್ರಮ ನಡೆಯಲಿದೆ. ಎ.28 ರಂದು ಸೂರ್ಯೋದಯಕ್ಕೆ ಶ್ರೀ ದೇವಿಯ ಭಂಡಾರ ಪ್ರತಿಷ್ಠಾಪನೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ಗಂಧ ಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಮಾದಿಗ ಹಾಗೂ ಸರ್ವ ಸದಸ್ಯರುಗಳ ಪ್ರಕಟಣೆ ತಿಳಿಸಿದೆ.
ಗೀತಾ ಸಾಹಿತ್ಯ ಸಂಭ್ರಮ
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಎ.೨೬ರಂದು ರಾತ್ರಿ ಸ್ಥಳೀಯ ಮಕ್ಕಳಿಂದ ಮತ್ತು ಊರವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದಲ್ಲದೆ ರಾತ್ರಿ 10 ಗಂಟೆಯಿಂದ ಕಲ್ಲಡ್ಕ ವಿಠಲ ನಾಯಕ್ ಬಳಗದವರಿಂದ ‘ ಗೀತಾ ಸಾಹಿತ್ಯ ಸಂಭ್ರಮ’ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕ್ಷೇತ್ರದ ಪ್ರಕಟಣೆ ತಿಳಿಸಿದೆ.