ನೆಲ್ಯಾಡಿ: ಕಾರು, ರಿಕ್ಷಾ ಡಿಕ್ಕಿ ರಿಕ್ಷಾ ಚಾಲಕನಿಗೆ ಗಾಯ

0

ನೆಲ್ಯಾಡಿ: ಕಾರು ಹಾಗೂ ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯಲ್ಲಿ ಎ.24ರಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಎರ್ಟಿಗಾ ಕಾರು ಹಾಗೂ ಆರ್ಲದಿಂದ ನೆಲ್ಯಾಡಿಗೆ ಬರುತ್ತಿದ್ದ ಆಟೋ ರಿಕ್ಷಾದ ಮಧ್ಯೆ ನೆಲ್ಯಾಡಿ ಸಂತೆಕಟ್ಟೆ ಸಮೀಪ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಶಾಂತಿಬೆಟ್ಟು ನಿವಾಸಿ ರಿಜ್ವಾನ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here