ಜ್ಞಾನ ರೈಯವರಿಗೆ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿ ಪ್ರದಾನ

0

ಪುತ್ತೂರು: ಬಹುಮುಖ ಪ್ರತಿಭೆ ಜ್ಞಾನ ರೈಯವರಿಗೆ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ವತಿಯಿಂದ ನಡೆದ ಕಾವ್ಯ ದಸರಾ -2022 ಕಾರ್ಯಕ್ರಮದಲ್ಲಿ ಜ್ಞಾನ ರೈ ಯವರ ಪ್ರತಿಭೆಯನ್ನು ಗುರುತಿಸಿ ಹಿರಿಯ ಸಾಹಿತಿಗಳಾದ ಡಾ. ಪ್ರಧಾನ ಗುರುದತ್ತ, ಡಾ. ಪುಷ್ಪ ಅಯ್ಯಂಗಾರ್, ಎ. ವೈದೇಹಿ, ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಆರ್. ಕೆ. ಬಾಲಚಂದ್ರ, ಪ್ರೊ. ಎಸ್.ವಿ. ಕುಂದಗೋಳ್, ಪ್ರೊ. ಶಕುಂತಲಾ ಸಿ. ಸಿಂಧೂರ್, ಆಧ್ಯಾತ್ಮಿಕ ಚಿಂತಕ ಮುತ್ತುಲಕ್ಷ್ಮಿ ಮತ್ತಿತರ ಗಣ್ಯರು ವಿಶ್ವಮಾನ್ಯ ಕನ್ನಡಿಗ ರಾಜ್ಯಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಸಿದ್ದಗಂಗಾಶ್ರೀ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ, ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ, ಸಮಾಜ ಸೇವಾ ರತ್ನ ರಾಜ್ಯಪ್ರಶಸ್ತಿ, ಕರುನಾಡ ತಾರೆ ರಾಜ್ಯ ಪ್ರಶಸ್ತಿ, ಆದಿಗ್ರಾಮೋತ್ಸವ ಪ್ರತಿಭಾ ಸಿರಿ ಗೌರವ ಪ್ರಶಸ್ತಿ , ಸುದ್ದಿ ಬಿಡುಗಡೆಯ ಪ್ರತಿಭಾ ದೀಪ ಪ್ರಶಸ್ತಿ ಪುರಸ್ಕೃತೆಯಾಗಿರುವ ಬಾಲಪ್ರತಿಭೆ ಜ್ಞಾನ ರೈ ಕುರಿಯ ಈಗಾಗಲೇ ಹಲವಾರು ಕಿರುಚಿತ್ರ ಹಾಗೂ ಆಲ್ಬಂ ಸಾಂಗ್ ಗಳಲ್ಲಿ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ನೃತ್ಯ, ಅಭಿನಯ ಮಾತ್ರವಲ್ಲದೆ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲೂ ಪ್ರಶಸ್ತಿಯನ್ನು ಪಡೆದುಕೊಂಡಿರುವ ಇವರು ಹಲವಾರು ಫೋಟೋ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ವಿಜೇತೆಯಾಗಿದ್ದಾರೆ. ಇವರು ಜಾಹೀರಾತಿನಲ್ಲೂ ನಟಿಸಿರುತ್ತಾರೆ.

ಧಾರ್ಮಿಕ ಶಿಕ್ಷಣದತ್ತ ಒಲವು ತೋರಿರುವ ಇವರು ಕೂಡ್ಲಿಗಿಯ ಗುರುದೇವ ಗುರುಕುಲದ ಶಶಿಧರ್ ಗುರೂಜಿಯವರಿಂದ ಭಗವದ್ಗೀತೆ ಪಠಣ, ನಿತ್ಯ ಶ್ಲೋಕಗಳು, ಅಬಾಕಸ್, ಗಾಂಧಾರಿ ವಿದ್ಯೆಯನ್ನು ಕಲಿತಿದ್ದಾರೆ.

ಪ್ರಸ್ತುತ ಭರತನಾಟ್ಯ, ಸಂಗೀತ, ಯಕ್ಷಗಾನ, ಕರಾಟೆ, ಯೋಗ, ಅಭ್ಯಾಸದಲ್ಲಿ ತೊಡಗಿಸಿಕೊಂಡಿರುವ ಹನ್ನೊಂದರ ಹರೆಯದ ಜ್ಞಾನ ರೈಯವರು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಉದ್ಯಮಿಯಾಗಿರುವ ಕುರಿಯ ಅಡ್ಯೆತ್ತಿಮಾರಿನ ಜಯರಾಮ ರೈ ಹಾಗೂ ಪತ್ರಕರ್ತೆ ಹೇಮಾ ಜಯರಾಮ್ ರೈಯವರ ಪುತ್ರಿ.

LEAVE A REPLY

Please enter your comment!
Please enter your name here