ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟದ ಪದಗ್ರಹಣದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ; ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಾಲಯ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕಕ್ಕೂರು, ರೆಂಜ, ಚೂರಿಪದವು ಇವುಗಳ ಸಹಕಾರದೊಂದಿಗೆ ಮೆ.15 ರಂದು ಬೆಟ್ಟಂಪಾಡಿ ದೇವಾಲಯದಲ್ಲಿ ನಡೆಯುವ 2 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ , ಒಕ್ಕೂಟದ ಪದಗ್ರಹಣ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರ ಬಿಡುಗಡೆ ಎ.24 ರಂದು ಬೆಟ್ಟಂಪಾಡಿ ದೇವಾಲಯದಲ್ಲಿ ನಡೆಯಿತು.

 

ದೇವಾಲಯದ ಪ್ರಧಾನ ಅರ್ಚಕ ದಿವಾಕರ ಭಟ್ ಪತ್ರ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು. ಕಕ್ಕೂರು ಒಕ್ಕೂಟದ ಮಾಜಿ ಅಧ್ಯಕ್ಷೆ ಪ್ರೇಮಲತಾ ಜೆ.ರೈ, ಬೆಟ್ಟಂಪಾಡಿ ಒಕ್ಕೂಟದ ಅಧ್ಯಕ್ಷ ರವಿನಾಥ ಕೋನಡ್ಕ,ಕಕ್ಕೂರು ಒಕ್ಕೂಟದ ನೂತನ ಅಧ್ಯಕ್ಷ ಶಂಕರ ಗುಂಡ್ಯಡ್ಕ,ಚೂರಿಪದವು ಒಕ್ಕೂಟದ ಅಧ್ಯಕ್ಷೆ ಅನಿತಾ.ಕೆ, ಸೇವಾ ಪ್ರತಿನಿಧಿಗಳಾದ ಜಗನ್ನಾಥ ಪಾಟಾಳಿ, ಲೀಲಾವತಿ.ಡಿ, ಸುಮ.ಬಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here