![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಪಂಚಾಯತ್ ರಾಜ್ ದಿವಸದ ಅಂಗವಾಗಿ ಬೆಳಂದೂರು ಗ್ರಾಮ ಪಂಚಾಯತ್ನಲ್ಲಿ ವಿಶೇಷ ಗ್ರಾಮ ಸಭೆಯು ಎ.24ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಯೋಗ ಸಾಧಕರಾದ ಪ್ರಣಮ್ಯ ಅಗಳಿ, ಕಾರ್ತಿಕ ಬೆಳಂದೂರು ಮತ್ತು ತ್ರೋಬಾಲ್ ಸಾಧಕಿ ಕಾರುಣ್ಯ ದೇವರಗುಡ್ಡೆ ಕುದ್ಮಾರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪ್ರಭಾರ ಪಂಚಾಯತ್ ಅಭಿವೃಧಿ ಅಧಿಕಾರಿ ನಾರಾಯಣ್, ಗ್ರಾ.ಪಂ. ಸದಸ್ಯರಾದ ಪ್ರವೀಣ್ ಕೆರೆನಾರು, ಮೋಹನ್ ಅಗಳಿ, ವಿಠಲ ಗೌಡ ಅಗಳಿ, ಜಯಂತ ಅಬೀರ, ಹರಿಣಾಕ್ಷಿ ಬನಾರಿ, ಉಮೇಶ್ವರಿ ಅಗಳಿ, ತಾರಾ ಅನ್ಯಾಡಿ, ಗೌರಿ ಮಾದೋಡಿ, ಪಾರ್ವತಿ ಮರಕ್ಕಡ, ಕುಸುಮಾ ಅಂಕಜಾಲು, ಸಿಬ್ಬಂದಿಗಳಾದ ಗೀತಾ, ಮಮತಾ, ಹರ್ಷಿತ್, ಸಂತೋಷ್ ಉಪಸ್ಥಿತರಿದ್ದರು.