ಪುತ್ತೂರು:ಕೋವಿಡ್ 4ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ಎಂಬ ತೀಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಕೊರೋನಾ ನಾಲ್ಕನೇ ಅಲೆಯ ತೀವ್ರತೆ ಮತ್ತು ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಜ್ಞರ ಪರಿಶೀಲನ ಸಭೆಯನ್ನು ನಡೆಸಿದರು. ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಇದಲ್ಲದೇ ಸೋಂಕು ಹೆಚ್ಚು ಇರುವ ದೇಶದಿಂದ ಬರುವವರ ಮೇಲೆ ನಿಗಾ ಇಡಲಾಗುವುದು, ಇನ್ನೂ ಕೊರೊನಾ ಸೋಂಕಿನ ಬಗ್ಗೆ ಶೀಘ್ರದಲ್ಲಿ ಮಾರ್ಗಸೂಚನೆ ಬಿಡುಗಡೆ ಮಾಡಲಾಗುವುದು ಸಭೆಯಲ್ಲಿ ತೀರ್ಮಾನಿಸಲಾಗಿದೆ.