ವಿಟ್ಲ: ಸಭಾಭವನದ ಕಾಮಗಾರಿ ವೇಳೆ ಲಕ್ನೋ ಮೂಲದ ಕಾರ್ಮಿಕರೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದ ಲಕ್ನೋ ಮೂಲದ ಕಾರ್ಮಿಕ ಜಯ ಪ್ರಕಾಶ್(25 ವ.)ರವರು ಮೃತಪಟ್ಟ ಕಾರ್ಮಿಕ. ವಿಟ್ಲದ ಚರ್ಚ್ ಒಂದರ ಅಧೀನಕ್ಕೊಳಪಟ್ಟ ಸಭಾಭವನದ ಫಿನಿಶಿಂಗ್ ಕೆಲಸ ಮಾಡುತ್ತಿದ್ದ ವೇಳೆ ಅವರು ಆಯತಪ್ಪಿ ಕೆಳಕ್ಕೆ ಬಿದ್ದಿದ್ದರು. ಏ.26 ರ ಸಂಜೆ ದುರ್ಘಟನೆ ಸಂಭವಿಸಿತ್ತು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ.