ಮೇ.1: ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 2ನೇ ಹಂತದ ಉಚಿತ ವೈದ್ಯಕೀಯ ಶಿಬಿರ

0

  • ಆರೋಗ್ಯ ರಕ್ಷಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಪುತ್ತೂರು:ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಶ್ರಯದಲ್ಲಿ ಆರೋಗ್ಯ ರಕ್ಷಾ ಸಮಿತಿಯ ವತಿಯಿಂದ ಪ್ರತಿ ತಿಂಗಳು ನಡೆಯುವ ಉಚಿತ ಆರೋಗ್ಯ ಶಿಬಿರದ ಎರಡನೇ ಹಂತದ ಶಿಬಿರವು ಮೇ.1ರಂದು ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಬಾರಿಯ ಶಿಬಿರದಲ್ಲಿ ಹೃದ್ರೋಗ ತಜ್ಞ ಡಾ ಸುರೇಶ್ ಪುತ್ತೂರಾಯ, ಆಯುರ್ವೇದ ವೈದ್ಯರಾದ ಡಾ.ದೀಕ್ಷಾ, ಸಾಯಿಪ್ರಕಾಶ್ ಶಿಬಿರದಲ್ಲಿ ತಜ್ಞ ವೈದ್ಯರುಗಳಾಗಿ ಭಾಗವಹಿಸಲಿದ್ದಾರೆ. ಉಚಿತ ರಕ್ತ ಪರೀಕ್ಷೆ, ಇಸಿಜಿ ಹಗೂ ಔಷಧಿಗಳನ್ನು ಉಚಿತವಾಗಿ ನೀಡಲಾಗುವುದು. ಸತ್ಯಸಾಯಿ ಆಸ್ಪತ್ರೆ, ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ, ಮಹಾವೀರ ಆಸ್ಪತ್ರೆ, ಸುಶ್ರುತ ಆಯುರ್ವೇದ ಆಸ್ಪತ್ರೆಗಳು ಹಾಗೂ ಹಲವು ಔಷಧಿ ಕಂಪನಿಗಳು ಶಿಬಿರದಲ್ಲಿ ಸಹಕರಿಸಲಿದ್ದಾರೆ. ರಕ್ತಪರೀಕ್ಷೆ ನಡೆಸುವ ಮಧುಮೇಹದ ರೋಗಿಗಳು ಖಾಲಿ ಹೊಟ್ಟೆಯಲ್ಲಿ ಭಾಗವಹಿಸಬೇಕು. ಶಿಬಿರವು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1ಗಂಟೆಯ ತನಕ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ.ಸುರೇಶ್ ಪುತ್ತೂರಾಯ ಮಾಹಿತಿ ನೀಡಿದರು.

ಆರೋಗ್ಯ ರಕ್ಷಾ ಸಮಿತಿ ಸಂಚಾಲಕ ಪ್ರಸ್ನನ ಕುಮಾರ್ ಮಾರ್ತ ಮಾತನಾಡಿ, ಕಳೆದ ಶಿಬಿರದಲ್ಲಿ ಊಟ, ಉಪಾಹಾರವನ್ನು ಒದಗಿಸಿಕೊಟ್ಟ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಕುಮಾರ್ ನಾಯರ್ ಹಾಗೂ ಶಿಬಿರಕ್ಕೆ ದೇಣಿಗೆ ನೀಡಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಶಿಬಿರದಲ್ಲಿ ಸಂಪ್ಯ ನವಚೇತನ ಯುವಕ ಮಂಡಲ ಹಾಗೂ ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿಯವರ ಸಹಕರಿಸಲಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಕುಮಾರ್ ನಾಯರ್, ಲಕ್ಷ್ಮಣ ಬೈಲಾಡಿ, ಭೀಮಯ್ಯ ಭಟ್, ಹರಿಣಿ ಪುತ್ತೂರಾಯ, ಸಂತೋಷ್ ಮುಕ್ರಂಪಾಡಿ, ಮಂಜಪ್ಪ ಗೌಡ ಬೈಲಾಡಿ, ವಸಂತ ಗೌಡ, ನವೀನ್ ಕುಕ್ಕಾಡಿ, ಸುರೇಶ್, ಜಯರಾಮ ಪಂಜಳ, ಉಮೇಶ್ ಎಸ್.ಕೆ. ಮೊದಲಾದವರು ಉಪಸ್ಥಿತರಿದ್ದರು. ಉದಯಕುಮಾರ ರೈ ಎಸ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here