ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.೩೦ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ಜಾತ್ರೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವ ನಡೆಯಲಿದೆ. ಎ.೨೪ರಂದು ಗೊನೆ ಮುಹೂರ್ತ ನಡೆದಿದ್ದು ಎ.30ರಂದು ಬೆಳಿಗ್ಗೆ ವಿವಿಧ ಕಡೆಗಳಿಂದ ಸಂಗ್ರಹವಾದ ಹಸಿರು ಹೊರೆ ಕಾಣಿಕೆಯು ವಿನಾಯಕ ನಗರ ದ್ವಾರದಿಂದ ಮೆರವಣಿಗೆಯು ಮೂಲಕ ದೇವಸ್ಥಾನಕ್ಕೆ ಅರ್ಪಣೆ ಯಾಗಲಿದೆ. ನಂತರ ಸ್ಥಳೀಯ ಭಜನಾ ಮಂಡಳಿಗಳಿಂದ ಭಜನಾ ಸೇವೆ ಜರಗಲಿದೆ. ನಂತರ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ವಾಚನ, ಪಂಚವಿಂಶತಿ ಕಲಶ ಪೂಜೆ, ಮಹಾಗಣಪತಿ ಹೋಮ, ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಲಲಿತ ಸಹಸ್ರನಾಮ ಪಾರಾಯಣ, ದೈವಗಳ ಭಂಡಾರ ತೆಗೆಯುವುದು, ರಾತ್ರಿ ಶ್ರೀ ದೇವಿಗೆ ರಂಗಪೂಜೆ, ಬಳಿಕ ಶ್ರೀ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ವಸಂತ ಕಟ್ಟೆ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮತ್ತು ಧರ್ಮದೈವಗಳ ನೇಮೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.