ನೆಲ್ಯಾಡಿ: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ, ಕಡಬ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ನೆಲ್ಯಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪಂಚಾಯತ್ ಸದಸ್ಯರುಗಳ, ಮಾಜಿ ಸದಸ್ಯರುಗಳ, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳ, ಪಕ್ಷದ ಮುಖಂಡರುಗಳ, ಬೂತ್ ಸಮಿತಿ ಅಧ್ಯಕ್ಷರುಗಳ, ಕಾರ್ಯಕರ್ತರ ಸಮಾಲೋಚನಾ ಸಭೆ ಎ.29ರಂದು ನೆಲ್ಯಾಡಿಯಲ್ಲಿರುವ ಬಿರ್ವ ಹೋಟೆಲ್ನ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರೂ, ವಿಧಾನಪರಿಷತ್ ಸದಸ್ಯರೂ ಆದ ಮಂಜುನಾಥ ಭಂಡಾರಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರೂ ಆದ ಹರೀಶ್ಕುಮಾರ್, ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡುರವರು ಉಪಸ್ಥಿತರಿದ್ದು ಸಂವಾದ ನಡೆಸಿದರು. ಕೆಪಿಸಿಸಿ ಸದಸ್ಯ ಕೃಷ್ಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ರೇಷ್ಮಾಶಶಿ, ಉಷಾಜೋಯಿ, ತಾ.ಪಂ.ಮಾಜಿ ಸದಸ್ಯೆ ಆಶಾ ಲಕ್ಷ್ಮಣ್, ಶಿರಾಡಿ ಗ್ರಾ.ಪಂ.ಅಧ್ಯಕ್ಷೆ ವಿನೀತಾ ತಂಗಚ್ಚನ್, ಉಪಾಧ್ಯಕ್ಷ ಕಾರ್ತಿಕೇಯನ್, ಪಕ್ಷದ ಮುಖಂಡರಾದ ಜಾರ್ಜ್ಕುಟ್ಟಿ ಉಪದೇಶಿ, ವರ್ಗೀಸ್ ಅಬ್ರಹಾಂ, ಜೋಸ್ ಕೆ.ಜೆ., ರೋಯಿ ಇಚ್ಲಂಪಾಡಿ ಮತ್ತಿತರರು ವಿವಿಧ ವಿಚಾರಗಳನ್ನು ಪ್ರಸ್ತಾಪಿಸಿದರು.
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೆಪಿಸಿಸಿ ಸದಸ್ಯ, ಉದ್ಯಮಿ ಕೆ.ಪಿ.ತೋಮಸ್ ವಂದಿಸಿದರು. ಕಡಬ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳಾದ ದಿವಾಕರ ಗೌಡ ಉದನೆ, ಸತೀಶ್ಕುಮಾರ್ ಕೆಡೆಂಜಿ, ವಿಜಯಕುಮಾರ್ ಕೆರ್ಮಾಯಿ, ರಾಯ್ ಅಬ್ರಹಾಂ ಪದವು, ಜಿ.ಪಂ.ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಪೂವಪ್ಪ ಕರ್ಕೇರ, ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಬ್ರಹಾಂ ಕೆ.ಪಿ., ಕಡಬ ಬ್ಲಾಕ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಜಯಾನಂದ ಬಂಟ್ರಿಯಾಲ್, ಪ್ರಶಾಂತ್ ರೈ ಅರಂತಬೈಲು, ಪ್ರಮುಖರಾದ ಇಸ್ಮಾಯಿಲ್ ನೆಲ್ಯಾಡಿ, ಸತೀಶ್ ರೈ ಕೊಣಾಲುಗುತ್ತು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.