ನೆಲ್ಯಾಡಿ: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ಎಂಬಲ್ಲಿ ಸೆಲೆರಿಯೋ ಕಾರು ಹಾಗೂ ಒಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಎರಡು ಕಾರಿನಲ್ಲಿದ್ದವರು ಗಾಯಗೊಂಡಿರುವ ಘಟನೆ ಎ.27ರಂದು ರಾತ್ರಿ ನಡೆದಿದೆ.
ಧರ್ಮಸ್ಥಳದಿಂದ ಸುಳ್ಯಕ್ಕೆ ತೆರಳುತ್ತಿದ್ದ ಕಾರು(ಕೆಎ 21 ಝೆಡ್ 1122) ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಒಮ್ನಿ ಕಾರು(ಕೆಎ 16 ಎಂ 5282) ನಡುವೆ ಪೊಟ್ಲಡ್ಕದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಹಾಗೂ ಒಮ್ನಿಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ಹಾಗೂ ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಎರಡೂ ವಾಹನಗಳ ಚಾಲಕರ ನಿರ್ಲಕ್ಷ್ಯತನ ಮತ್ತು ಅಜಾರಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ದೂರು ದಾಖಲಾಗಿದೆ. ಕೌಕ್ರಾಡಿ ಗೌಡಸಾಗು ನಿವಾಸಿ, ಆಂಬ್ಯುಲೆನ್ಸ್ ಚಾಲಕ ಟಿಪ್ಪು ಸುಲ್ತಾನ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.