ಮೇ.1; ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಮೃತ ಮಹೋತ್ಸವ ವರ್ಷಾಚರಣೆ ಉದ್ಘಾಟನೆ

0

ಉಪ್ಪಿನಂಗಡಿ: ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ ಅಮೃತ ಮಹೋತ್ಸವ ವರ್ಷಾಚರಣೆ “ಅಮೃತ ಸಂಗಮ” ಉದ್ಘಾಟನಾ ಕಾರ್‍ಯಕ್ರಮ ಮೇ. 1 ರಂದು ಉಪ್ಪಿನಂಗಡಿ ಸಂಗಮ ಕೃಪಾ ಸಭಾ ಭವನದಲ್ಲಿ ಜರಗಲಿದೆ.

ಬೆಳಿಗ್ಗೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಸಂಕೀರ್ಣದಿಂದ ಸಂಘದ ಸಂಗಮಕೃಪಾ ಸಭಾಭವನದವರೆಗೆ “ಅಮೃತ ಸಂಗಮ ಸಹಕಾರಿ ಮೆರವಣಿಗೆ” ನಡೆಯಲಿದೆ. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಕಾರ್‍ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು, ಭಾರತ ಸರಕಾರದ ಪದ್ಮಶ್ರೀ ಪುರಸ್ಕೃತರಾದ ಕೃಷಿ ಪಂಡಿತ ಆಧುನಿಕ ಭಗೀರಥ ಅಮೈ ಮಹಾಲಿಂಗ ನಾಯ್ಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ. ನಾಯಕ್ ಉಪಸ್ಥಿತರಿರುತ್ತಾರೆ.

LEAVE A REPLY

Please enter your comment!
Please enter your name here