ಪುತ್ತೂರು: ಹಿಂದು ಜಾಗರಣ ವೇದಿಕೆ ಸವಣೂರು ಘಟಕದ ವತಿಯಿಂದ ಮೇ 1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಸವಣೂರು ಬಸದಿ ವಠಾರದ ಪ್ರಿಯಕಾರಣಿ ಸಭಾಭವನದಲ್ಲಿ ಜರುಗಲಿದೆ.
ಹಿಂದು ಜಾಗರಣಾ ವೇದಿಕ ಪುತ್ತೂರು ನಗರ ಗೌರವಾಧ್ಯಕ್ಷವ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಅವರು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂಜಾವೇ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹಿಂದು ಜಾಗರಣ ವೇದಿಕೆ ಸವಣೂರು ಘಟಕದ ಪ್ರಕಟಣೆ ತಿಳಿಸಿದೆ.