ಮೆ.1; ಇರ್ದೆ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟದ ಪದಗ್ರಹಣ, ಧಾರ್ಮಿಕ ಸಭೆ

0

ನಿಡ್ಪಳ್ಳಿ; ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣುಮೂರ್ತಿ ದೇವಾಲಯ ಶ್ರೀ ಗೋಪಾಲಕ್ಷೇತ್ರ ಇರ್ದೆ ಇದರ ಆಶ್ರಯದಲ್ಲಿ ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟೆಗದ್ದೆ, ಉಪ್ಪಳಿಗೆ, ಅಜ್ಜಿಕಲ್ಲು, ಅಜಲಡ್ಕ ಇವುಗಳ ಸಹಕಾರದೊಂದಿಗೆ 18 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ, ಧಾರ್ಮಿಕ ಸಭಾ ಕಾರ್ಯಕ್ರಮ ಮೆ.1 ರಂದು ಇರ್ದೆ ದೇವಸ್ಥಾನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8 ರಿಂದ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಿ ಗಂಟೆ 11 ಕ್ಕೆ ಮಹಾಪೂಜೆ ನಂತರ ಧಾರ್ಮಿಕ ಸಭೆ ನಡೆದು ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ. ಡಿ ವಹಿಸಲಿದ್ದು ನಿವೃತ್ತ ಮುಖ್ಯ ಗುರು ಮಂಜುಳಗಿರಿ ವೆಂಕಟ್ರಮಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದು ‌ ಎಸ್.ಕೆ.ಡಿ.ಅರ್.ಡಿ.ಪಿ ಯ ದ.ಕ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಇರ್ದೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಮಾಜಿ ಅಧ್ಯಕ್ಷ ವಿಠಲ್ ರೈ ಬೈಲಾಡಿ, ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಬೆಟ್ಟಂಪಾಡಿ ವಲಯಾಧ್ಯಕ್ಷ ನವೀನ್ ಕುಮಾರ್. ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here