ಕಾವು: ಪಕ್ಷ ಸಂಘಟನೆಗೆ ಮುಂದಾಗಲು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕರೆ

0

ಕಾವು: ಪಕ್ಷ ನಮಗೆ ಅನೇಕ ಅವಕಾಶಗಳನ್ನು ಕೊಟ್ಟಿದೆ. ಅದನ್ನು ನಾವು ಬಳಸಿಕೊಂಡಿದ್ದೇವೆ ಎನ್ನುವ ಸ್ವ ವಿಮರ್ಶೆ ಮಾಡುವುದರೊಂದಿಗೆ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕರೆ ನೀಡಿದರು.

ಅವರು ಶನಿವಾರ ಸಂಜೆ ಕಾವುನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷದಿಂದ ಚುನಾಯಿತರಾದ ಜನಪ್ರತಿನಿಧಿಗಳು ಮತ್ತು ಸ್ಪರ್ಧಿಸಿದ್ದ ಅಭ್ಯರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು.

ಸಾಮೂಹಿಕ ನಾಯಕತ್ವದಲ್ಲಿ ಪಕ್ಷವನ್ನು ಕಟ್ಟಬೇಕು. ಇದರ ಅನಿವಾರ್ಯತೆ ಇದೆ. ಯುವಕರಿಗೆ ಅವಕಾಶ ಕಲ್ಪಿಸಬೇಕು ಎಂದು ಮಂಜುನಾಥ್ ಭಂಡಾರಿ ವಿವರಿಸಿದರು.ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ನಾಯಕರಾದ ಸುಭಾಶ್ಚಂದ್ರ ರೈ ಕೊಳ್ನಾಡು, ಮಹಮ್ಮದ್ ಬಡಗನ್ನೂರು, ಸಂತೋಷ್ ರೈಭಾಗವಹಿಸಿದ್ದರು. ಕೆದಂಬಾಡಿ, ಕೊಳ್ತಿಗೆ, ಕೈಯೂರು, ಅರಿಯಡ್ಕ, ನೆಟ್ಟಣಿಗೆ ಮುಡ್ನೂರು, ಸವೆ೯-ಮುಂಡೂರು, ಬಡಗನ್ನೂರು ಗ್ರಾಮದ ಕಾಂಗ್ರೆಸ್ ಪ್ರಮುಖರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here