ಅಪರಿಚಿತ ಶವ ಪತ್ತೆ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಬಸ್ ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 45 ವರ್ಷ ಪ್ರಾಯದ ಈ ವ್ಯಕ್ತಿ ಕೈ ಚೀಲವೊಂದರ ಜೊತೆ ಬಸ್ ತಂಗುದಾಣಕ್ಕೆ ಬಂದಾತ ಅಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದಂತಿದೆ. ಆತನ ಬಳಿಯಲ್ಲಿದ್ದ ವಸ್ತುಗಳ ಆಧಾರದಲ್ಲಿ ಆತ ಚಿತ್ರದುರ್ಗ ಪರಿಸರದ ನಿವಾಸಿ ಎಂದು ಅಂದಾಜಿಸಲಾಗಿದ್ದು, ಅಲ್ಲಿನ ಪೊಲೀಸರ ಮೂಲಕ ವ್ಯಕ್ತಿಯ ಗುರುತು ಪತ್ತೆಗೆ ಪ್ರಯತ್ನಿಸಲಾಗುತ್ತಿದೆ

LEAVE A REPLY

Please enter your comment!
Please enter your name here