ಅಮೃತ ಸಂಗಮ ಗೋಷ್ಠಿ: ಕೃಷಿ ವಿಚಾರ ಸಂಗಮ

0

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ ಇದರ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ವರ್ಷಪೂರ್ತಿ ನಡೆಯಲಿರುವ “ಅಮೃತ ಸಂಗಮ” ಕಾರ್ಯಕ್ರಮದ ಉದ್ಘಾಟನೆಯೊಂದಿಗೆ ಅಮೃತ ಸಂಗಮ ಗೋಷ್ಠಿ-ಕೃಷಿ ವಿಚಾರ ಸಂಗಮ ನಡೆಯಿತು.

ವಿಟ್ಲ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ. ಭವಿಷ್ಯ ಅಡಿಕೆಯೊಂದಿಗೆ ಬಹುಬೆಳೆ ಕೃಷಿ ಪದ್ಧತಿ ಮತ್ತು ಅದರ ನಿರ್ವಹಣೆ ಬಗ್ಗೆ ರೈತರೊಂದಿಗೆ ಸಂವಾದ ನಡೆಸಿ ಮಾತನಾಡಿ ಹೊಸ ತಳಿ ಬಳಕೆ, ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಬಗ್ಗೆ, ಅದರ ಪೋಷಣೆ ಮೊದಲಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಬೋಡೋ ದ್ರಾವಣ ತಯಾರಿಕೆ ಬಗ್ಗೆ ವಿಟ್ಲ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ತಾಂತ್ರಿಕ ಅಧಿಕಾರಿ ಪುರಂದರ ಸಿ. ಮಾಹಿತಿ ನೀಡಿದರು. ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರವೀಣ್ ಆಳ್ವ ಸ್ವಾಗತಿಸಿ, ಶೋಭಾ ವಂದಿಸಿದರು. ಸುಬ್ಬಪ್ಪ ಕೈಕಂಬ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here