- ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರಿಗೆ ಪಂಚಾಯಿತಿ ಸದಸ್ಯ ನಝೀರ್ ಮನವಿ
ಉಪ್ಪಿನಂಗಡಿ: ಕೊಯಿಲ ಗ್ರಾಮದ 2 ನೇ ವಾರ್ಡುನಲ್ಲಿರುವ ರಸ್ತೆಗಳು ತೀರಾ ನಾದುರಸ್ತಿಯಲ್ಲಿದ್ದು, ಇದರ ಕಾಂಕ್ರಿಟೀಕರಣ ಕಾಮಗಾರಿ ಮಾಡುವ ಸಲುವಾಗಿ ಅನುದಾನ ಒದಗಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರಿಗೆ ಕೊಯಿಲ ಗ್ರಾಮ ಪಂಚಾಯಿತಿ ಸದಸ್ಯ ನಝೀರ್ ಪೂರಿಂಗ ಮನವಿ ಸಲ್ಲಿಸಿದರು. ಕೊಯಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡುನಲ್ಲಿರುವ ಗಂಡಿಬಾಗಿಲು-ಸಂನ್ಯಾಸಿಮೂಲೆ ರಸ್ತೆ ಮತ್ತು ಗಂಡಿಬಾಗಿಲು ಜನತಾ ಕಾಲೋನಿ ರಸ್ತೆ ತೀರಾ ನಾದುರಸ್ತಿಯಲ್ಲಿದ್ದು, ಇದರ ಕಾಂಕ್ರೀಕರಣ ಕಾಮಗಾರಿಗೆ ಅನುದಾನ ಒದಗಿಸುವಂತೆ ಕೋರಲಾಗಿ ಮನವಿಯಲ್ಲಿ ನಿವೇದಿಸಲಾಗಿದೆ.
ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಕೃಷ್ಣಪ್ಪ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸರ್ವೋತ್ತಮ ಗೌಡ, ರಾಮಕುಂಜ ಗ್ರಾಮ ಪಂಚಾಯಿತಿ ಸದಸ್ಯ ಯತೀಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.