ಪುತ್ತೂರು: ಪಡೀಲು ಅಂಗನವಾಡಿಯಲ್ಲಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ ಎ.30ರಂದು ನಡೆಯಿತು. ನಗರಸಭೆ ಸದಸ್ಯೆ ಪ್ರೇಮಲತಾ ನಂದಿಲ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಣ ಸಂಪನ್ಮೂಲ ಅಧ್ಯಕ್ಷೆ ಹರಿಣಾಕ್ಷಿ ಜೆ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನಿನ ಅರಿವು ಕುರಿತು ಮಕ್ಕಳ ಪೋಷಕರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸುಮಾರು 45 ಮಕ್ಕಳಿಗೆ ಪುಸ್ತಕ, ಪೆನ್ಸಿಲ್, ಕಂಪಾಸ್ ವಿತರಣೆ ಮಾಡಲಾಯಿತು. ಹಾರಾಡಿ ಶಾಲೆ ಮುಖ್ಯಗುರು ಕುಕ್ಕಸರ್, ಮಾಜಿ ಪುರಸಭೆ ಅಧ್ಯಕ್ಷೆ ವಾಣಿ ಶ್ರೀಧರ್, ಬಾಲವಿಕಾ ಯೋಜನೆ ಅಧ್ಯಕ್ಷೆ ಗೀತಾ, ಸದಸ್ಯರಾದ ಸುರೇಶ್, ಅಂಗನವಾಡಿ ಕಾರ್ಯಕರ್ತೆ ರೋಹಿಣಿ, ಸಹಾಯಕಿ ರುಕ್ಮಿಣಿ ಉಪಸ್ಥಿತರಿದ್ದರು. ಸೌಮ್ಯ ಸ್ವಾಗತಿಸಿ, ಮೈಮುನ ಪಡೀಲ್ ಕಾರ್ಯಕ್ರಮ ನಿರೂಪಿಸಿದರು.