ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಅಂಗನವಾಡಿ ಕೇಂದ್ರದಲ್ಲಿ ಪುಟಾಣಿ ಮಕ್ಕಳಿಗೆ ಬೀಳ್ಕೊಡುಗೆ ಮತ್ತು ಪುತ್ತೂರು ತಾಲೂಕಿನ ಅತ್ಯುತ್ತಮ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತರಾಗಿರುವ ಕೊಡಿಮರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೇವತಿ ಎ.ರವರಿಗೆ ಸನ್ಮಾನ ಕಾರ್ಯಕ್ರಮ ಕೋಡಿಂಬಾಡಿ ಗ್ರಾ.ಪಂ.ಸದಸ್ಯ ರಾಮಣ್ಣ ಗೌಡ ಗುಂಡೋಳೆರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾ.ಪಂ.ಸದಸ್ಯೆ ಪುಷ್ಪಾ ಲೋಕಯ್ಯ ನಾಯ್ಕ, ಬೆಳ್ಳಿಪ್ಪಾಡಿ ಉ.ಹಿ.ಪ್ರಾ ಶಾಲಾ ಮುಖ್ಯಗುರು ಯಶೋದಾ, ತಾ.ಪಂ.ಮಾಜಿ ಸದಸ್ಯೆ ನೇತ್ರಾವತಿ ಗೌಡ, ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಅರುಣಾ ಡಿ. ಬೀರಿಗ, ಕೋಡಿಂಬಾಡಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಂಧ್ಯಾ, ಕೋಡಿಂಬಾಡಿ ಸ್ತ್ರಿಶಕ್ತಿ ಗೊಂಚಲಿನ ಅಧ್ಯಕ್ಷೆ ಪವಿತ್ರಾ ಶೇಖರ್, ಶ್ರೀನಿವಾಸ ಶೆಟ್ಟಿ ಕಠಾರ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೇವತಿ ಎ. ಸ್ವಾಗತಿಸಿ, ಪವಿತ್ರ ವಂದಿಸಿದರು. ಸಂಧ್ಯಾ ಕೈಲಾಜೆ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕೇಂದ್ರದ ಸಹಾಯಕಿ ದಿವ್ಯ ಕೆ.ಎಂ. ಸಹಕರಿಸಿದರು.