ಕಾಣಿಯೂರು: ಸುಳ್ಯ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಸುಳ್ಯ ಮಂಡಲದಲ್ಲಿ ಮೂರು ವರ್ಷಗಳ ಅವಧಿಗೆ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರದ ವ್ಯಾಪ್ತಿಯಿಂದ ಚೇತನ್ ನಾವೂರು ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಚೇತನ್ ನಾವೂರು ನೀಡಿರುವ ರಾಜಿನಾಮೆ ಅಂಗೀಕಾರಗೊಂಡಿದೆ ಎನ್ನಲಾಗಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿಗೆ ಸಲ್ಲಿಸಿರುವ ರಾಜಿನಾಮೆ ಪತ್ರದಲ್ಲಿ ನನ್ನನ್ನು ಗುರುತಿಸಿ ಪಕ್ಷದ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಿದ ತಮಗೆ ಅಭಾರಿಯಾಗಿದ್ದು, ಕೆಲವೊಂದು ವೈಯುಕ್ತಿಕ ವಿಚಾರಗಳಿಂದ ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಚೇತನ್ ನಾವೂರು ತಿಳಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು ತನ್ನ ವೈಯುಕ್ತಿಕ ಕಾರಣಗಳಿಂದ ತನ್ನ ಸ್ಥಾನಕ್ಕೆ ರಾಜಿನಾಮೆ ಸುಳ್ಯ ಬಿಜೆಪಿ ಮಂಡಲ ಸಮಿತಿಗೆ ಸಲ್ಲಿಸಿದ್ದು, ರಾಜಿನಾಮೆಯನ್ನು ಅಂಗೀಕಾರ ಮಾಡಲಾಗಿದೆ. – ರಾಕೇಶ್ ರೈ ಕೆಡೆಂಜಿ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಸುಳ್ಯ ಮಂಡಲ ಸಮಿತಿ
ಸ್ಥಳೀಯ ಬಿಜೆಪಿ ನಾಯಕರ ವರ್ತನೆಯಿಂದ ಮನನೊಂದು ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದೇನೆ. ನನ್ನನ್ನು ಗುರುತಿಸಿ ಪಕ್ಷದ ಜವಾಬ್ದಾರಿ ನೀಡಿದ ಎಲ್ಲರಿಗೂ ಅಭಾರಿಯಾಗಿದ್ದೇನೆ. ಮುಂದಕ್ಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಬೂತ್ ಮಟ್ಟದಲ್ಲಿ ಸೇವೆ ಸಲ್ಲಿಸುತ್ತೇನೆ. –ಚೇತನ್ ನಾವೂರು