ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಹಿರೇಬಂಡಾಡಿ ಶಾಖೆಯ ಪ್ರಧಾನ ವ್ಯವಸ್ಥಾಪಕಿ ಉಷಾರವರಿಗೆ ಬೀಳ್ಕೊಡುಗೆ

0

ಪುತ್ತೂರು : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 35 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಉಷಾ ಆರ್.ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ ಸಂಘದ ಕೇಂದ್ರ ಕಛೇರಿಯ ಸಂಗಮ ಕೃಪಾ ಸಭಾಭವನದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಉಷಾ ಆರ್.ಕೆ.ರವರನ್ನು ಸನ್ಮಾನಿಸಿ ಮಾತನಾಡಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ದಕ್ಷತೆ, ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಿದವರು ಆಗಿದ್ದಾರೆ, ಇವರ ಕರ್ತವ್ಯದ ಅವಧಿಯಲ್ಲಿ ಹಿರೇಬಂಡಾಡಿ ಗ್ರಾಮದಲ್ಲಿ ವ್ಯವಹಾರಾದ ಉನ್ನತಿಯು ಇವರ ಕರ್ತವ್ಯಕ್ಕೆ ಸಾಕ್ಷಿಯಾಗಿದೆ.

ಇವರ ಇಬ್ಬರು ಸುಪುತ್ರರು ಸೇನೆಯಲ್ಲಿ ಉನ್ನತ ಮಟ್ಟದಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವುದು ಹಾಗೂ ಇವರ ಪತಿಯವರು ಸೇನೆಯಲ್ಲಿ ಸೇವೆ ಸಲ್ಲಿಸಿದವರಾಗಿದ್ದು ಇಡೀ ತಮ್ಮ ಕುಟುಂಬದ ಮೂರು ಮಂದಿಯು ದೇಶದ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಗೌರವಕ್ಕೆ ಪಾತ್ರವಾಗಿದ್ದಾರೆ. ಇವರ ಮುಂದಿನ ಜೀವನವು ಸುಖಮಯವಾಗಿರಲಿ ಎಂದು ಹೇಳಿದರು. ಪುತ್ತೂರು ಉಪವಿಭಾಗದ ಸಹಾಯಕ ನಿಬಂಧಕಿ ಸುಕನ್ಯಾ ಮಾತನಾಡಿ ಉಷಾ ಆರ್.ಕೆ.ರವರ ಸೇವೆಯನ್ನು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ ಪ್ರಸಾದ್ ಮಾತನಾಡಿ ಉಷಾ ಆರ್.ಕೆ. ರವರು ಸಹಕಾರಿ ಕ್ಷೇತ್ರಕ್ಕೆ ನಿಷ್ಠೆಯಿಂದ ಕರ್ತವ್ಯ ನಿರ್ವಹಣೆ ಮಾಡಿದ್ದನ್ನು ತಿಳಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಉಪ ಮುಖ್ಯನಿರ್ವಹಣಾಧಿಕಾರಿ ಶೋಭಾ ಕೆ. ಸನ್ಮಾನಪತ್ರ ವಾಚಿಸಿದರು. ಶಾಖಾ ವ್ಯವಸ್ಥಾಪಕ ಪುಷ್ಪರಾಜ್ ಶೆಟ್ಟಿ ಎಚ್. ಮತ್ತು ಲೆಕ್ಕಾಧಿಕಾರಿ ಪ್ರವೀಣ ಆಳ್ವ ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು ವಂದಿಸಿದರು. ಶ್ರಾವ್ಯ ಪ್ರಾರ್ಥಿಸಿ, ಶಶಿಧರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ರವೀಶ ಎಚ್.ಟಿ, ಗಾಯತ್ರಿ ಹಾಗೂ ಚೇತನಾ ಸಹಕರಿಸಿದರು.

LEAVE A REPLY

Please enter your comment!
Please enter your name here