ರಾಮಕುಂಜ: ಕಾರು ಹಾಗೂ ಆಕ್ಟೀವಾ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಕ್ಟೀವಾ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ರಾಮಕುಂಜ ಆತೂರಿನಲ್ಲಿ ಮೇ 2ರಂದು ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ತಮಿಳುನಾಡು ಮೂಲದವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಉಪ್ಪಿನಂಗಡಿಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಆಕ್ಟೀವಾ ನಡುವೆ ಆತೂರಿನಲ್ಲಿ ಮುಖಾಮುಖಿ ಡಿಕ್ಕಿ ನಡೆದಿದೆ. ಘಟನೆಯಲ್ಲಿ ಆಕ್ಟೀವಾ ಸವಾರ ಪೆರಾಬೆ ಗ್ರಾಮದ ಮರುವಂತಿಲ ನಿವಾಸಿ ಮಹಮ್ಮದ್(50ವ.)ಎಂಬವರು ಗಾಯಗೊಂಡಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಕಾರು ಚಾಲಕ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ವಿರುದ್ಧ ದಿಕ್ಕಿನಲ್ಲಿ ಬಂದು ಆಕ್ಟೀವಾಗೆ ಡಿಕ್ಕಿ ಹೊಡೆದಿರುವುದಾಗಿ ಹೇಳಲಾಗಿದೆ. ಸ್ಥಳೀಯರ ಸಹಕಾರದೊಂದಿಗೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.