ಪುತ್ತೂರು: 5 ದಿನದ ಹಿಂದೆ ಮನೆಯಲ್ಲಿ ಕುಸಿದು ಬಿದ್ದು ತೀವ್ರ ಗಾಯಗೊಂಡಿದ್ದ ಯುವಕರೊಬ್ಬರು ಚಿಕಿತ್ಸೆಗೆ ಸ್ಪಂಧಿಸದೆ ಮೇ 2ರಂದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕೇಪುಳು ದಿ.ಬಾಬು ಎಂಬವರ ಪುತ್ರ ಪಡೀಲು ರೆಸ್ಟೋರೆಂಟ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆನಂದ (26ವ) ರವರು ಮೃತಪಟ್ಟವರು. ಅವರು ಎ.27 ಕ್ಕೆ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೇ 2 ರಂದು ಮೃತಪಟ್ಟಿದ್ದಾರೆ. ಮೃತರು ತಾಯಿ ಮಾನಿಗ, ಸಹೋದರರಾದ ಹರೀಶ್, ಅಶೋಕ್, ಅರವಿಂದ ಅವರನ್ನು ಅಗಲಿದ್ದಾರೆ.