ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಸವ ಜಯಂತಿ ಆಚರಣೆ

0

  • ಬಸವಣ್ಣನವರು ಸಾಮಾಜಿಕ ಸುಧಾರಣೆಗಳ ಹರಿಕಾರ – ದಯಾನಂದ

 

ಪುತ್ತೂರು: ಬಸವಣ್ಣನವರು ಹಲವು ಸಾಮಾಜಿಕ ಸುಧಾರಣಾ ಕಾರ್ಯಗಳಿಂದಲೇ ಪ್ರಸಿದ್ಧಿಯಾದವರು ಎಂದು ಕಂದಾಯ ನಿರೀಕ್ಷಕ ದಯಾನಂದ ಅವರು ನುಡಿದರು.ತಾಲೂಕು ರಾಷ್ಡ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮೇ 3 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾಜ ಜಾತಿ ವ್ಯವಸ್ಥೆಯಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು. ಸಮಾನತೆ ಇರಬೇಕು ಎಂದು ಬಯಸಿದ್ದ ಅವರು, ಅದಕ್ಕಾಗಿಯೇ ಶ್ರಮಿಸಿದರು ಎಂದರು. ಭೂಮಾಪನ ಶಾಖೆಯ ಪರಿರ್ಯಾಯ ವೀಕ್ಷಕ ಮಹೇಶ್ ಅವರು ಸಂಸ್ಮರಣಾ ಜ್ಯೋತಿ ಪ್ರಜ್ವಲಿಸಿದರು. ಈ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆಯ ಜಾನುವಾರು ಅಭಿವೃದ್ದಿ ಅಧಿಕಾರಿ ಹೊನ್ನಪ್ಪ ಬಿ ಗೌಡ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here