ರೆಂಜಿಲಾಡಿ:ಚರ್ಚ್ ಗೋಪುರದ ಶಿಲುಬೆ ಕಿತ್ತು ಕೇಸರಿ ಧ್ವಜ -ವಿಡಿಯೋ ವೈರಲ್

0

  • ಸತ್ಯಾಸತ್ಯತೆ ತಿಳಿಯಲು ಸ್ಥಳಕ್ಕೆ ಭೇಟಿ ನೀಡಿದ ಹಿಂದೂಪರ ಸಂಘಟನೆ ಮುಖಂಡರು

ಕಡಬ: ರೆಂಜಿಲಾಡಿ ಗ್ರಾಮದ ಪೇರಡ್ಕ ಸಮೀಪದ ಎನ್ಕಜೆಯಲ್ಲಿನ ಇಮ್ಯಾನ್ಯುವೆಲ್ ಎ.ಜಿ.ಚರ್ಚ್‌ನ ಗೋಪುರದ ಶಿಲುಬೆಯನ್ನು ಕಿತ್ತು ಚರ್ಚ್‌ನಲ್ಲಿ ಕೇಸರಿ ಧ್ವಜ ಹಾಕಿದ್ದಾರೆ ಎನ್ನುವ ಸುದ್ದಿಯ ಹಿನ್ನೆಲೆಯಲ್ಲಿ ಗೊಂದಲವೇರ್ಪಟ್ಟು ಹಿಂದೂಪರ ಸಂಘಟನೆಗಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚರ್ಚ್‌ನಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಎರಡು ದಿನಗಳ ಹಿಂದೆ ಕಿಡಿಗೇಡಿಗಳು ಗೋಪುರದ ಶಿಲುಬೆಯನ್ನು ಕಿತ್ತು ಅಲ್ಲಿ ಕೇಸರಿ ಧ್ವಜ ಅಳವಡಿಸಿ ಚರ್ಚ್‌ನ ಬಾಗಿಲು ಒಡೆದು ಒಳಪ್ರವೇಶಿಸಿ ಒಳಗಡೆ ಹನುಮಂತನ ಫೊಟೋ ಇರಿಸಿ ದೀಪ ಹಚ್ಚಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದುದು ಗೊಂದಲಕ್ಕೆ ಕಾರಣವಾಗಿತ್ತು. ಅದು ಹಿಂದೂ ಪರ ಸಂಘಟನೆಗಳ ಕೃತ್ಯ ಎನ್ನುವ ದೂರುಗಳು ವ್ಯಕ್ತವಾಗಿತ್ತು. ಆದರೆ ಪೊಲೀಸ್ ಠಾಣೆಯಲ್ಲಿ ಆ ಬಗ್ಗೆ ಯಾವುದೇ ದೂರು ದಾಖಲಾಗಿರಲಿಲ್ಲ.

ಹಿಂದೂ ಸಂಘಟನೆ ಮುಖಂಡರ ಭೇಟಿ: ಆರೋಪದ ಹಿನ್ನೆಲೆಯಲ್ಲಿ ಬಜರಂಗದಳ ಮುಖಂಡ ಮುರಳಿಕೃಷ್ಣ ಭಟ್ ಹಸಂತಡ್ಕ ಅವರು ಮಂಗಳವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆಯಲ್ಲಿ ಹಿಂದೂ ಸಂಘಟನೆಗಳ ಪಾತ್ರವನ್ನು ಅಲ್ಲಗೆಳೆದಿರುವ ಅವರು, ಚರ್ಚ್ ಎನ್ನಲಾಗಿರುವ ಕಟ್ಟಡ ಸ್ಥಳೀಯ ಎನ್ಕಜೆ ವಿಶ್ವನಾಥ ಗೌಡ ಅವರಿಗೆ ಸೇರಿದ್ದು, ಅದನ್ನು ಈ ಹಿಂದೆ ಬಾಡಿಗೆ ಆಧಾರದಲ್ಲಿ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರಿಗೆ ನೀಡಲಾಗಿತ್ತು. ಅವರು ಅಲ್ಲಿ ಹಲವು ವರ್ಷಗಳ ಹಿಂದೆ ಕ್ರಿಶ್ಚಿಯನ್ ದಫನ ಭೂಮಿ ನಿರ್ಮಿಸಲು ಮುಂದಾದಾಗ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಹೊರಗಿನಿಂದ ಬಂದಿರುವ ಕ್ರಿಶ್ಚಿಯನ್ ಸಮುದಾಯದ ಕೆಲವರು ಅದೇ ಸ್ಥಳದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಮುಂದಾಗುತ್ತಿದ್ದಾರೆ. ದಫನ ಭೂಮಿಗಾಗಿ ಮಣ್ಣು ಅಗೆದು ಗುಂಡಿಯನ್ನೂ ತೋಡಿದ್ದಾರೆ. ಜನರ ಅನುಕಂಪ ಗಳಿಸುವ ಉzಶದಿಂದ ಅಲ್ಲಿರುವ ಹಳೆಯ ಕಟ್ಟಡಕ್ಕೆ ಕೇಸರಿ ಧ್ವಜ ಅಳವಡಿಸಿ ಹನುಮಂತನ ಫೊಟೋ ಇರಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ದೂರಿದರು. ಕೂಡಲೇ ಅಲ್ಲಿನ ಅಕ್ರಮ ರಚನೆಗಳನ್ನು ತೆರವು ಮಾಡಿ ವಿಶ್ವನಾಥ ಗೌಡರಿಗೆ ಸೇರಿದ ಜಮೀನನ್ನು ಅವರಿಗೆ ಕೊಡಿಸುವ ಕೆಲಸವನ್ನು ಸಂಬಂಧಪಟ್ಟ ಇಲಾಖೆಯವರು ಮಾಡಬೇಕು. ಇಲ್ಲದೇ ಹೋದರೆ ಉಗ್ರ ರೀತಿಯ ಪ್ರತಿಭಟನೆ ನಡೆಸುವುದಾಗಿ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ. ಆರೆಸ್ಸೆಸ್ ಮುಖಂಡ ವೆಂಕಟ್ರಮಣ ರಾವ್ ಮಂಕುಡೆ, ವಿಹಿಂಪ-ಬಜರಂಗದಳ ಕಡಬ ಪ್ರಖಂಡದ ಅಧ್ಯP ರಾಧಾಕೃಷ್ಣ ಕೋಲ್ಪೆ, ಪ್ರಮೋದ್ ರೈ ನಂದಗುರಿ, ಉಮೇಶ್ ಶೆಟ್ಟಿ ಸಾಯಿರಾಂ, ಅಜಿತ್ ರೈ ಆರ್ತಿಲ ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here