ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀ ಯ ಹೆದ್ದಾರಿ ಪುತ್ತೂರು ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು ಸ್ಕೂಟರ್ ನಲ್ಲಿದ್ದ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಶೇಖಮಲೆ ಸಮೀಪದ ಅರಿಯಡ್ಕ ಗ್ರಾಮದ ಪನೆಕ್ಕಳ ಜಾರತ್ತಾರು ನಿವಾಸಿ ಆದಂ ಎಂಬವರ ಮಗ ಸಿನಾನ್ (18) ಮೃತಪಟ್ಟವರು. ಗಂಭೀರ ಗಾಯಗೊಂಡ ಯುವಕ ಸೆಂಸಂಟ್ಯಾರ್ ಕುಂಞಿಚ್ಚ ಎಂಬವರ ಮಗ ಆಶಿರ್ ಅಪ್ಪು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಡಾ. ಗಾನ ಪಿ ಕುಮಾರ್ ಮತ್ತು ಸಂಚಾರ ಪೊಲೀಸ್ ಠಾಣಾ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.