ಕಡಬ:ಇಲ್ಲಿನ ತಹಶೀಲ್ದಾರ್ ಕಚೇರಿ ಬಳಿ ಬೈಕ್-ಆಟೋ ನಡುವೆ ಡಿಕ್ಕಿ ಸಂಭವಿಸಿ ಚಾಲಕ,ಸವಾರರು ಪ್ರಾಣಪಾಯದಿಂದ ಪಾರಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಬಾಲಕೃಷ್ಣ ಎಂಬರಿಗೆ ಸೇರಿದ ಆಟೋ ರಿಕ್ಷಾಕ್ಕೆ ಕೋಟೆಗುಡ್ಡೆಯ ಪ್ರಶಾಂತ್ ಎಂಬವರ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ .ಬೈಕ್ ಸವಾರ ಓವರ್ ಟೇಕ್ ಮಾಡಿದ್ದೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.
ಈ ಅಪಘಾತದಿಂದ ಆಟೋ ಮತ್ತು ಬೈಕ್ ಗೆ ಹಾನಿಯಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.