ಕೆಯ್ಯೂರು ಶ್ರೀ ಕ್ಷೇತ್ರದಲ್ಲಿ ಅಷ್ಟಮಂಗಳ ಪ್ರಶ್ನಾ ಚಿಂತನೆ: ಪರಿಹಾರ, ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ

0

ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ‌ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ತತ್ಕಾಲ ಪರಿಹಾರಕ್ಕಾಗಿ ಮೆ 5ರಂದು ಬ್ರಹ್ಮಶ್ರೀ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಸಂಜೀವಿನಿ ಮೃತ್ಯುಂಜಯ ಹೋಮ, ಐಕ್ಯಮತ್ಯ ಭಾಗ್ಯ ಸುಕ್ತ ಹೋಮ, ಶಾಂತದುರ್ಗಾ ಅರ್ಚನೆ , ಸಾಮೂಹಿಕ ಪ್ರಾರ್ಥನೆ, ಮುಷ್ಟಿ ಕಾಣಿಕೆ, ಬಲವಾಡು ಕೂಟ ಸೇವೆಗಳು ನಡೆಯಿತು ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. 
ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ವಿವಿಧ ತಂಡದ ಭಜನಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಶಶಿಧರ ರಾವ್ ಬೊಳಿಕಲ, ಸದಸ್ಯರುಗಳಾದ ಶ್ರೀನಿವಾಸರಾವ್(ಅರ್ಚಕರು),ರಾಮಣ್ಣ ಗೌಡ ಮಾಡಾವು, ವಿಶ್ವನಾಥ ಶೆಟ್ಟಿ ಸಾಗು, ಬಾಬು ಪಾಟಾಳಿ ದೇರ್ಲ, ಚರಣ್ ಕುಮಾರ್ ಸಣಂಗಳ, ಪದ್ಮನಾಭ ಪಿ.ಎಸ್ ಪಲ್ಲತ್ತಡ್ಕ, ಈಶ್ವರಿ ಜೆ.ರೈ ಸಂತೋಷ್ ನಗರ, ಮಮತಾ ಎಸ್ ರೈ ಕೆಯ್ಯೂರು, ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ಶ್ರೀ ದುರ್ಗಾ ಭಜನಾ ಮಂಡಳಿ ಕೆಯ್ಯೂರು ಅದ್ಯಕ್ಷರು, ಸರ್ವ ಸದಸ್ಯರುಗಳು, ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆಯ ಅಧ್ಯಕ್ಷರು , ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು,  ಅರ್ಚಕ ವೃಂದ, ಊರ ಭಕ್ತಾದಿಗಳು, ಉಪಸ್ಥಿತರಿದ್ದರು.
\

LEAVE A REPLY

Please enter your comment!
Please enter your name here