ಆರ್ಯಾಪು: ಕಂಬಳದಡ್ಡ ಅಂಗನವಾಡಿ ಕೇಂದ್ರದ ಮಕ್ಕಳ ಬೀಳ್ಕೊಡುಗೆ ಸಮಾರಂಭ

0

 

ಪುತ್ತೂರು  ಆರ್ಯಾಪು ಗ್ರಾಮದ ಕಂಬಳದಡ್ಡ ಅಂಗನವಾಡಿ ಕೇಂದ್ರದ ಮಕ್ಕಳ ಬೀಳ್ಕೊಡುಗೆ ಸಮಾರಂಭವು ಶ್ರೀ ಚಕ್ರ ರಾಜರಾಜೇಶ್ವರಿ ಬೂಡಿಯಾರು ಹೊಸಮನೆ ದೇವಸ್ಥಾನದ ವಠಾರದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷ ಸೌಮ್ಯಶ್ರೀಯವರ ಅಧ್ಯಕ್ಷತೆಯಲ್ಲಿ   ಮೇ.5ರಂದು  ನಡೆಯಿತು.

 

ಆರ್ಯಾಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ  ಪೂರ್ಣಿಮಾ ರೈ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಪುಸ್ತಕ ಮತ್ತು ಪೆನ್ಸಿಲ್ ನೀಡಿ ಬೀಳ್ಕೊಡುತ್ತಿರುವ ಮಕ್ಕಳಿಗೆ ಶುಭ ಹಾರೈಸಿದರು. ಅಂಗನವಾಡಿ ಮೇಲ್ವಿಚಾರಕರಾದ ಜಲಜಾಕ್ಷಿ ಇವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ  ರತ್ನಾವತಿ, ಸಮುದಾಯ ಆರೋಗ್ಯ ಅಧಿಕಾರಿಯಾದ ಕು. ಕ್ಷಮ, ಶ್ರೀ ಕೃಷ್ಣ ಯುವಕ ಮಂಡಲ, ಕಂಬಳತಡ್ಡದ ಅಧ್ಯಕ್ಷ  ಸಂತೋಷ್ ಸುವರ್ಣ ಮೇರ್ಲ, ಶ್ರೀ ಚಕ್ರ ರಾಜರಾಜೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷ ನಳಿನಿ ಕೊಲ್ಯ , ಬೂಡಿಯಾರು ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದ ಕೋಶಾಧಿಕಾರಿ ಹಾಗೂ ಮಕ್ಕಳ ಸ್ಪರ್ಧೆಗಳ ಬಹುಮಾನದ ಪ್ರಾಯೋಜಕರೂ ಆಗಿರುವ ಧನುಶ್ ಹೊಸಮನೆ ಉಪಸ್ಥಿತರಿದ್ದು ಮಕ್ಕಳಿಗೆ ಶುಭಹಾರೈಸಿದರು. ಸಭೆಯಲ್ಲಿ ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘಗಳ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ಮಕ್ಕಳ ಪೋಷಕರು ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಬೀಳ್ಕೊಡುತ್ತಿರುವ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಸ್ಟೀಲ್ ಡ್ರಂ ಕೊಡುಗೆ ನೀಡಿದರು. ಇನ್ಷಾ ಫಾತಿಮಾ ಮಗುವಿನ ಪೋಷಕರಾದ ಅಬ್ಬಾಸ್ ಮರಕ್ಕ ಮಕ್ಕಳಿಗೆ ಸಿಹಿತಿಂಡಿ ನೀಡಿದರು. ಸ್ತ್ರೀಶಕ್ತಿ ಸದಸ್ಯರಾದ  ಚಂದ್ರಾವತಿ ರೈ ಇವರು ಪ್ರಾರ್ಥಿಸಿ, ಸ್ವಾಗತಿಸಿದರು .ಅಂಗನವಾಡಿ ಕಾರ್ಯಕರ್ತೆ ಶ್ಯಾಮಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

 

LEAVE A REPLY

Please enter your comment!
Please enter your name here