ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಶಂಕರ ಆಚಾರ್ಯ ಜಯಂತಿಯನ್ನು ಮೇ.6ರಂದು ತಾಲೂಕು ಆಡಳಿತ ಸೌಧದಲ್ಲಿನ ತಹಸೀಲ್ದಾರ್ ಸಭಾಂಗಣದಲ್ಲಿ ಆಚರಿಸಲಾಯಿತು.
ತಹಸೀಲ್ದಾರ್ ರಮೇಶ್ ಬಾಬು ಅವರು ಶ್ರೀ ಶಂಕರಾಚಾರ್ಯ ಅವರ ಭಾವ ಚಿತ್ರದ ಎದುರು ದೀಪ ಪ್ರಜ್ವಲಿಸಿ ಪುಷ್ಪಾರ್ಚಣೆ ಮಾಡಿ ಮಾತನಾಡಿ ಶಂಕರಾಚಾರ್ಯರವರು ಭಾರತೀಯ ವೈಚಾರಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದವರು ಎಂದರು.
ಉಪತಹಸೀಲ್ದಾರ್ ಸುಲೋಚನಾ ಅವರು ಶ್ರೀ ಶಂಕರಾಚಾರ್ಯರವರು ಜಗತ್ತಿಗೆ ನೀಡಿದ ಸಂದೇಶ ವಾಚಿಸಿದರು. ವೇದಿಕೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ಲೋಕೇಶ್ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ದಯಾನಂದ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಭೂಮಾಪನ ಶಾಖೆಯ ಪರಿರ್ಯಾಯ ವೀಕ್ಷಕ ಮಹೇಶ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.