ಕನ್ಯಾನ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಬಂಟ್ವಾಳ ಶಾಸಕರು ಭೇಟಿ

0

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ  ಆತ್ಮಹತ್ಯೆ ಮಾಡಿಕೊಂಡ  ವಿದ್ಯಾರ್ಥಿನಿಯ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ ಮಾಹಿತಿ ಪಡೆದುಕೊಂಡರು.

ಬಳಿಕ‌ ಮಾತನಾಡಿದ‌ ಅವರು ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಈ ನೆಲದ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ. ಮೃತ ಬಾಲಕಿಯ ಪೋಷಕರಿಗೆ ಬಂಟ್ವಾಳ ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಿಸಿಕೊಡುವುದಾಗಿ  ಶಾಸಕರು ಸ್ಥಳದಲ್ಲಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಮಂಡಲದ ಪದಾಧಿಕಾರಿಗಳು,ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here