ಪುತ್ತೂರು: ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶ ಮತ್ತು ದಕ್ಷಿಣ ಕನ್ನಡ ಆಡಳಿತಾತ್ಮಕ ನ್ಯಾಯಾಧೀಶ ನ್ಯಾಯಮೂರ್ತಿ ಕೆ ಸೋಮಶೇಖರ್ ಅವರು ಕುಟುಂಬ ಸಮೇತ ಮೇ.7ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನ ಶ್ರೀ ದೇವರ ಮಹಾಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಈ ಹಿಂದೆ ಪುತ್ತೂರಿನಲ್ಲಿ ನ್ಯಾಯಾಧೀಶರಾಗಿದ್ದು ಇದೀಗ ಬೆಂಗಳೂರು ಲೋಕಾಯುಕ್ತ ನ್ಯಾಯಾಧೀಶರಾಗಿರುವ ಬಸವರಾಜ್, ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಜೊತೆಯಲ್ಲಿದ್ದರು. ನ್ಯಾಯಾಧೀಶರುಗಳು ದೇವಳಕ್ಕೆ ಭೇಟಿ ನೀಡಿದ ಅವರು ದೇವಳದ ಚರಿತ್ರೆಯ ಮಾಹಿತಿ ಪಡೆದ ದೇವಳದ ಪುಷ್ಕರಣಿಗೆ ತೆರಳಿ ಮಸ್ಯಗಳಿಗೆ ಆಹಾರ ನೀಡಿದರು. ನ್ಯಾಯಾಧೀಶರುಗಳಿಗೆ ದೇವಳದ ಸತ್ಯ ಧರ್ಮ ನಡೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್ ಗೌಡ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ನ್ಯಾಯಾಧೀಶರುಗಳಿಗೆ ಶಾಲು ಹೊದಿಸಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ದೇವಳದ ಮಾಜಿ ಅಡಳಿತ ಮೊಕ್ತೇಸರ ಎನ್.ಕೆ.ಜಗನ್ನಿವಾಸ ರಾವ್, ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಕೋಶಾಧಿಕಾರಿ ಶ್ಯಾಮಪ್ರಸಾದ್ ಕೈಲಾರ್, ನ್ಯಾಯವಾದಿಗಳಾದ ನಾಗರಾಜ್, ಶ್ಯಾಮ ಪಾಣತ್ತಿಲ, ನ್ಯಾಯಾಲಯದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.