ಬಪ್ಪಳಿಗೆ ರಾಗಿಕುಮೇರಿ ಶ್ರೀಮಾರಿಯಮ್ಮ ಸಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

0

ಪುತ್ತೂರು : ಬಪ್ಪಳಿಗೆ ರಾಗಿಕುಮೇರಿ ಶ್ರೀಮಾರಿಯಮ್ಮ ಮತ್ತು ಸಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಿಗೆ ಮೇ.7ರಂದು ಚಾಲನೆ ದೊರೆತಿದ್ದು ದೈವಗಳ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಮೇ.೮ರಂದು ಬ್ರಹ್ಮಶ್ರೀ ವೇ.ಮೂ. ಕೆಮ್ಮಿಂಜೆ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ನೆರವೇರಿತು.

ಬ್ರಹ್ಮಕಲಶೋತ್ಸವದಲ್ಲಿ ಮೇ.೮ರಂದು ಬೆಳಿಗ್ಗೆ ಗಣಪತಿ ಹೋಮ, ಕಲಶಪೂಜೆ, ಪ್ರತಿಷ್ಠಾ ಕಲಶಾಭಿಷೇಕ, ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯ ಬಳಿಕ ಅಪರಾಹ್ನ ಪುನೀತ್ ಆರ್ಕೇಸ್ಟ್ರಾರವರಿಂದ ಭಕ್ತಿಗಾನಮೃತಾ ನಡೆಯಿತು.

LEAVE A REPLY

Please enter your comment!
Please enter your name here