ಪುತ್ತೂರು : ಎಚ್ಟಿ ಲೈನ್ ಸ್ಥಳಾಂತರ ಮತ್ತು ತುರ್ತು ಕಾಮಗಾರಿ ನಿಮಿತ್ತ ಮೇ.12ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಕಾಂಚನ, ಉಪ್ಪಿನಂಗಡಿ ಓಲ್ಡ್, ಉಪ್ಪಿನಂಗಡಿ ಎಕ್ಸ್ಪ್ರೆಸ್, ರಾಮಕುಂಜ ಮತ್ತು ವಾಟರ್ಸಪ್ಲೈ ಫೀಡರ್ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/22/11ಕೆ.ಇ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು ಮತ್ತು ಬೆಳ್ಳಿಪ್ಪಾಡಿ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಗಮನಿಸಬೇಕೆಂದು ಪ್ರಕಟಣೆ ತಿಳಿಸಿದೆ.