ಪುತ್ತೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಉಮಾ ಎಂ.ಜಿ ರವರು ಮೇ 9ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನದ ಮಹಾ ಪೂಜೆ ನೆರವೇರಿಸಿದರು. ಬಳಿಕ ಅನ್ನಪ್ರಸಾದ ಸ್ವೀಕರಿಸಿದರು. ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ., ಮಾಜಿ ಅಧ್ಯಕ್ಷ ಮಹೇಶ್ ಕಜೆ, ಕೋಶಾಧಿಕಾರಿ ಶ್ಯಾಮ್ ಪ್ರಸಾದ್ ಕೈಲಾರ್, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಜತೆ ಕಾರ್ಯದರ್ಶಿ ಸೀಮಾ ನಾಗರಾಜ್, ಕಜೆ ಲಾ ಚೇಂಬರ್ಸ್ ನ ದೀಪಿಕಾ ಭಟ್ ಕಜೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಶೇಖರ ನಾರಾವಿ, ರಾಮದಾಸ ಗೌಡ, ವೀಣಾ ಬಿ.ಕೆ. ಮತ್ತಿತರರು ನ್ಯಾಯಮೂರ್ತಿಯವರನ್ನು ಬರಮಾಡಿಕೊಂಡರು.