ಮರ್ದಾಳ: ಕಳ್ಳತನದ ಆರೋಪಿ ಬಂಧನ

0

  • ಆರೋಪಿಗೆ ನ್ಯಾಯಾಂಗ ಬಂಧನ

ಕಡಬ: ಮೂರು ತಿಂಗಳ ಹಿಂದೆ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮನೆಗೆ ನುಗ್ಗಿ ನಗದು ಕಳವುಗೈದಿರುವ ಆರೋಪಿಯನ್ನು ಕಡಬ ಪೋಲೀಸರು ಮೇ.9ರಂದು ಬಂಧಿಸಿದ್ದಾರೆ.  ಆರೋಪಿಯನ್ನು ಮರ್ದಾಳ ನಿವಾಸಿ ಹಕೀಂ (೨೩) ಎಂದು ಗುರುತಿಸಲಾಗಿದೆ. ಹಕೀಂಗೆ ಕಳ್ಳತನಕ್ಕೆ ಸಹಕರಿಸಿ ಇನ್ನೋರ್ವ ಆರೋಪಿ ಹಮೀದ್(೨೫) ಇನ್ನೊಂದು ಪ್ರಕರಣದಲ್ಲಿ ಬೆಂಗಳೂರಿನ ಪೋಲೀಸರು ಬಂಧಿಸಿದ್ದು, ಅವರನ್ನು ಕಡಬ ಪೋಲಿಸರು ಇನ್ನಷ್ಟೆ ವಶಕ್ಕೆ ಪಡೆಯಬೇಕಿದೆ.

ಫೆ ೨೨ ರಂದು ರಾತ್ರಿ ಪಾಲೆತಡ್ಕ ನಿವಾಸಿ ಬಾಲಕೃಷ್ಣ ರೈ ಎಂಬವರ ಮನೆಯ ಹಿಂಬಾಗಿಲಿನಿಂದ ನುಗ್ಗಿ ಮನೆಯಲ್ಲಿದ್ದ ೬೬,೦೦೦ ರೂ ವನ್ನು ಕಳವುಗೈಯ್ಯಲಾಗಿತ್ತು. ಬಾಲಕೃಷ್ಣ ರೈ ಅವರಿಗೆ ಮರ್ದಾಳ ದಲ್ಲಿ ಅಂಗಡಿ ಇದ್ದು. ಇವರ ಚಲನವಲನಗಳ ಮೇಲೆ ನಿಗಾ ಇಟ್ಟು ಸಮಯ ಸಾಧಿಸಿ ಕಳ್ಳತನ ಗೈಯ್ಯಲಾಗಿದೆ. ಹಕೀಂ ಮರ್ದಾಳದ ಹೋಟೇಲೊಂದರಲಿ ಕೆಲಸ ಮಾಡುತ್ತಿದ್ದು. ಹಮೀದ್ ಅವರ ತಂದೆ ಕೂಡಾ ಅಲ್ಲೇ ಕೆಲ ನಿರ್ವಹಿಸುತ್ತಿದ್ದರು. ಆಗಾಗ ಹೋಟೇಲ್‌ಗೆ ಬರುತ್ತಿದ್ದ ಹಮೀದ್ ಹಕೀಂನೊಂದಿಗೆ ಕಳ್ಳತನದ ವ್ಯವಹಾರ ಇಟ್ಟುಕೊಂಡಿದ್ದರು. ಅಂತೆಯೇ ಬಾಲಕೃಷ್ಣ ರೈ ಅವರ ಮನೆಗೆ ಕನ್ನ ಹಾಕಲು ನಿರ್ಧರಿಸಿ ರಾತ್ರೋ ರಾತ್ರಿ ಮನೆಗೆ ನುಗ್ಗಿ ಹಣ ಕಳವುಗೈದಿದ್ದಾರೆ. ೬೬,೦೦೦ ನಲ್ಲಿ ೩೦,೦೦೦ ರೂ ಪಾಲು ಪಡೆದ ಹಮೀದ್ ಅಲ್ಲಿ ಇಲ್ಲಿ ತಿರುಗಾಡಿ ಕೊನೆಗೆ ಬೆಂಗಳೂರಿಗೆ ತೆರಳಿದ್ದರು. ಇತ್ತ ಹಮೀದ್ ಕಳ್ಳತನದ ತನ್ನ ಪಾಲಿನ ಹಣದಲ್ಲಿ ೨೭,೦೦೦ ರೂ ವನ್ನು ಹೋಟೇಲ್‌ನಲ್ಲಿದ್ದ ಚಾಂಪಿಯನ್ ಶೀಲ್ಡ್ ಅಡಿಯಲ್ಲಿಟ್ಟಿದ್ದರು. ಇದೀಗ ಖಚಿತ ಮಾಹಿತಿಯ ಆಧಾರದ ಮೇಲೆ ಮರ್ದಾಳ ದಲ್ಲಿ ಕಡಬ ಪೋಲೀಸರು ಬಂಧಿಸಿದ್ದಾರೆ. ಕಡಬ ಎಸ್‌ಐ ಆಂಜನೇಯ ರೆಡ್ಡಿ ಮಾರ್ಗದರ್ಶನದಲ್ಲಿ ತನಿಖಾ ಎಸ್‌ಐ ಶ್ರೀಕಾಮತ್ ರಾತೋಡ್, ಪೋಲೀಸ್ ಸಿಬ್ಬಂದಿಗಳಾದ ರಮೇಶ್, ಮಹೇಶ್, ಭವಿತ್, ದೀಪಕ್ ಮತ್ತಿತರರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here