ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತ ಕಾರ್ಯಾಗಾರ ತರಂಗ-2022

0

 

ಪುತ್ತೂರು:  ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ನಿಯಮಗಳ ಪರಿಚಯ ಮಾಡುವಜೊತೆಗೆ ಸೂಕ್ತ ಜ್ಞಾನ ನೀಡುವುದುಅವಶ್ಯಕವಾಗಿದೆ.ಇಂದಿನ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಪರಿವರ್ತನೆತಂದುಕಲಿಕೆಯಲ್ಲಿಆಸಕ್ತಿ ಮೂಡಿಸವಂತೆ ಮಾಡುತ್ತದೆ. ಸಮಾಜಕ್ಕೆಒಬ್ಬ ಪರಿಣಿತ ಶಕ್ತಿಯಾಗಿ ಬದುಕು ಸಾಗಿಸಬೇಕು .ಎಂದು ಬೆಟ್ಟಂಪಾಡಿಯ ನವೋದಯ ಶಾಲೆಯ ನಿಕಟಪೂರ್ವ ಸಂಚಾಲಕರಾದ ಮಂಜಳಗಿರಿ ವೆಂಕಟರಮಣ ಭಟ್ ಹೇಳಿದರು.

 

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೂರು ದಿನಗಳ ಕಾರ್ಯಾಗಾರ ತರಂಗ- 2022 ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್‍ಯಕ್ರಮದಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಕೇಶವ ಮೂರ್ತಿಯವರು ಮಾತನಾಡುತ್ತಾ,ವಿದ್ಯಾರ್ಥಿಗಳ ಶೈಕ್ಷಣಿಕ ,ದೈಹಿಕ,ಮಾನಸಿಕ ಪ್ರಗತಿಯಲ್ಲಿಉತ್ತಮ ಪರಿಸರದ ಪಾತ್ರ ಪ್ರಮುಖವಾಗಿದೆ. ಈ ಸಂಸ್ಥೆಯ ಪ್ರಶಾಂತ ಪರಿಸರ ಹಾಗೂ ಗುಣಮಟ್ಟದ ಬೋಧನೆ ನೀಡುತ್ತಿರುವುದು ಬದಲಾವಣೆಯ ಸಂಕೇತಎಂದು ಹೇಳಿದರು.ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 60೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಕಾರ್ಯಕ್ರಮದಲಿ ಕಾಲೇಜಿನ ಗ್ರಂಥಪಾಲಕರಾದ ಮಂಜುಗಣೇಶ್ ಸ್ವಾಗತಿಸಿ,ಉಪನ್ಯಾಸಕರಾದ  ನಾಗಶ್ರೀ ವಂದಿಸಿದರು. ಮಧುರಾ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here