ಪುತ್ತೂರು: ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಒಳಮೊಗ್ರು ಗ್ರಾಮದ ಕಲ್ಲಡ್ಕ ನಿವಾಸಿಯಾಗಿದ್ದ ಶಿವಪ್ರಸಾದ್ ಆಳ್ವ (52ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೇ.11ರಂದು ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಅವರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇವರು ಆರಂಭದಲ್ಲಿ ಕುಂಬ್ರದಲ್ಲಿ ಎಲೆಕ್ಟ್ರೋನಿಕ್ಸ್ ಅಂಗಡಿಯನ್ನು ಹೊಂದಿದ್ದರು ಆ ಬಳಿಕ ಪುತ್ತೂರಿನಲ್ಲಿ ಸಾಯಿ ಡಿಜಿಟಲ್ ಸ್ಟುಡಿಯೋ ಆರಂಭಿಸಿದ್ದರು. ಮೃತರು ಪತ್ನಿ ದೀಪಾ, ಪುತ್ರರಾದ ಸಮೃದ್ ಮತ್ತು ಸದ್ಗುಣ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.