ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾಗಿ ಕೆ.ಪಿ. ಸುಚರಿತ ಶೆಟ್ಟಿ

0

 

ನೂತನ ಅಧ್ಯಕ್ಷರಿಗೆ ಪ್ರಮಾಣ ಪತ್ರ ನೀಡುತ್ತಿರುವುದು

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಮಾಜಿ ಜಿ.ಪಂ. ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಮೇ ೧೨ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಬಂಟ್ವಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣೆ ಪ್ರಕ್ರಿಯೆ ನಡೆಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ, ನಿರ್ದೇಶಕರಾದ ರವಿರಾಜ ಹೆಗ್ಡೆ, ಪ್ರಕಾಶ್ಚಂದ್ರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಬಿ. ನಿರಂಜನ್, ಪದ್ಮನಾಭ ಶೆಟ್ಟಿ ಅರ್ಕಜೆ, ಕೆ. ನಾರಾಯಣ ಪ್ರಕಾಶ್, ಬಿ. ಸುಧಾಕರ ರೈ, ಸುಧಾಕರ ಶೆಟ್ಟಿ, ನರಸಿಂಹ ಕಾಮತ್, ಶ್ರೀಮತಿ ಸುಭದ್ರಾ ರಾವ್, ಶ್ರೀಮತಿ ಸವಿತಾ ಎನ್. ಶೆಟ್ಟಿ, ಶ್ರೀಮತಿ ಸ್ಮಿತಾ ಆರ್ ಶೆಟ್ಟಿ, ಬಿ. ಸದಾಶಿವ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಸುರೇಶ್ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ. ಅಶೋಕ್ ಹಾಜರಿದ್ದರು.

LEAVE A REPLY

Please enter your comment!
Please enter your name here