ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದ ರೋಟರಿಪುರ ನಿವಾಸಿ ಹೃದಯಾಘಾತದಿಂದ ನಿಧನ

0

ಪುತ್ತೂರು: ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದು ಪುತ್ತೂರು ಮನೆಗೆ ಬಂದಿದ್ದ ಚಿಕ್ಕಮುಡ್ನೂರು ಗ್ರಾಮದ ರೋಟರಿಪುರ ಕೂಡಮರ ನಿವಾಸಿ ಉಮೇಶ್ ರೈ ಮೇ13 ರಂದು ಹೃದಯಾಘಾತದಿಂದ ನಿಧನರಾದರು.


ಕೂಡಮರ ಉಮೇಶ್ ರೈ ಅವರು ಕ್ರಿಕೆಟ್ ಪಟುವಾಗಿದ್ದು ಬೆಂಗಳೂರಿನಲ್ಲಿ ಮೆಕ್ಯಾನಿಕ್ ಉದ್ಯೋಗ ಮಾಡಿಕೊಂಡಿದ್ದರು. ಕಳೆದ ಒಂದು ತಿಂಗಳ ಹಿಂದೆ ಅವರಿಗೆ ಅನಾರೋಗ್ಯ ಕಂಡ ಹಿನ್ನಲೆಯಲ್ಲಿ ವಿಶ್ರಾಂತಿಗಾಗಿ ಮನೆಗೆ ಬಂದಿದ್ದರು. ಮೇ.13 ರ ಬೆಳಿಗ್ಗೆ ಅವರಿಗೆ ಎದೆ ನೋವು ಕಾಣಿಸಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಅಕ್ಷತಾ, ಪುತ್ರ ಅದ್ವಿಕ್, ನಾಲ್ವರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here