ಉಪ್ಪಿನಂಗಡಿ: ಇಲ್ಲಿನ ನಟ್ಟಿಬೈಲು ದರ್ಗಾ ಶರೀಫ್ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶುಹದಾಗಳ ಸ್ಮರಣಾರ್ಥ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ನಟ್ಟಿಬೈಲು ದರ್ಗಾ ಉರೂಸ್ ಸಮಾರಂಭ ಮೇ.16ರಂದು ಜರಗಲಿದೆ ಎಂದು ನುಸ್ರತುಲ್ ಇಸ್ಲಾಂ ಕಮಿಟಿ, ಮಾಲಿಕುದ್ದೀನಾರ್ ಜುಮಾ ಮಸೀದಿ ಆಡಳಿತ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮೇ.16ರಂದು ಅಸರ್ ನಮಾಜಿನ ಬಳಿಕ ಮೌಲಿದ್ ಪಾರಾಯಣ ನಡೆಯಲಿದ್ದು, ಕರುವೇಲು ಬದ್ರಿಯಾ ಜುಮಾ ಮಸೀದಿಯ ಖತೀಬ್ ಸಯ್ಯದ್ ಅನಸ್ ತಂಙಳ್ ಮತ್ತು ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿ ಖತೀಬ್ ಅಬ್ದುಲ್ ಸಲಾಂ ಫೈಝಿ ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.