ಬಿಸಿರೋಡ್‌ನಲ್ಲಿ ಆಂಜನೇಯ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ಶ್ರೀ ಶಂಕರ ಸೇವಾ ಪ್ರತಿಷ್ಠಾನ , ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ , ಯಕ್ಷಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಇದರ ಆಶ್ರಯದಲ್ಲಿ ಬಿ.ಸಿ.ರೋಡ್‌ನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ವಠಾರದಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯಿತು. ಈ ಸಂದರ್ಭದಲ್ಲಿ ಆಂಜನೇಯ ಯಕ್ಷಗಾನ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಅವರನ್ನು ಗೌರವಿಸಲಾಯಿತು.


ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಪದ್ಯಾಣ ಶಂಕರನಾರಾಯಣ ಭಟ್, ಶ್ರೀಹರಿ ಪದ್ಯಾಣ ಸಹಕರಿಸಿದರು. ಮ್ಮೇಳದಲ್ಲಿ ಭಾಸ್ಕರ್ ಬಾರ್ಯ ( ಶ್ರೀರಾಮ ) ಕೈಯೂರು ನಾರಾಯಣ ಭಟ್ ( ಜಟಾಯು ) ಅಚ್ಯುತ ಪಾಂಗಣ್ಣಾಯ ( ಕಬಂಧ ) ನಾ.ಕಾರಂತ , ಪೆರಾಜೆ ( ಶಬರಿ ) ಗುಡ್ಡಪ್ಪ ಬಲ್ಯ (ಹನೂಮಂತ ) ಸಹಕರಿಸಿದರು. ಈ ಸಂದರ್ಭದಲ್ಲಿ ಭಾಸ್ಕರ್ ಬಾರ್ಯರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here