ನಾಳೆ(ಮೇ.15) ಆಲಂಕಾರಿನಲ್ಲಿ ದಿ.ಕಮಲಾಕ್ಷ ರೈಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

0

ಪುತ್ತೂರು: ವಿವಿಧ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಮುಖಂಡರಾಗಿದ್ದು, ಇತ್ತೀಚೆಗೆ ನಿಧನರಾದ ಕಮಲಾಕ್ಷ ರೈ ಮನವಳಿಕೆಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಮೇ.15ರಂದು ಸಂಜೆ 5 ಗಂಟೆಗೆ ಆಲಂಕಾರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಮೃತರು ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ ಪುತ್ತೂರು ಇದರ ಅಧ್ಯಕ್ಷರಾಗಿ, ಜಯಕರ್ನಾಟಕ ಆಲಂಕಾರು ವಲಯದ ಅಧ್ಯಕ್ಷರಾಗಿ, ಕನ್ನಡ ನಾಡು ಪಕ್ಷದ ತಾಲೂಕು ಅಧ್ಯಕ್ಷರಾಗಿ, ಎಂಡೋ ಸಲ್ಫಾನ್ ವಿರೋಧಿ ಹೋರಾಟಗಾರರಾಗಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಚಿರಪರಿಚಿತರಾಗಿದ್ದ ಇವರು ಉತ್ತಮ ಭಜನಾಪಟುವಾಗಿ, ಕಬಡ್ಡಿ ಆಟಗಾರರಾಗಿ, ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here