ಸಂಪ್ಯ ಪೊಲೀಸರ ಕಾರ್ಯಾಚರಣೆ – ಅಪ್ರಾಪ್ತ ಬಾಲಕನಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಅರೋಪಿ ಬಂಧನ

0


ಪುತ್ತೂರು: ಅಜ್ಜಿಗೆ ಮನೆಗೆ ಬಿಡುವೆನೆಂದು ಹೇಳಿ ಅಪ್ರಾಪ್ತ ಬಾಲಕನನ್ನು ದಾರಿ ಮಧ್ಯೆ ಅಪರಿಚಿತ ವ್ಯಕ್ತಿ ಕರೆದೊಯ್ದು ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ 22 ದಿನಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಸರಗೋಡು ಜಿಲ್ಲೆಯ ನೆಕ್ರಾಜೆ ನಿವಾಸಿ ಗಣೇಶ್ ಎಂಬವರ ಪುತ್ರ ಶ್ರೀಜಿತ್(27ವ)ರವರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಬಂಧಿತ ಆರೋಪಿ. ಎ.22ರಂದು  9ವರ್ಷದ ಬಾಲಕ ಹಾಲು ತರಲೆಂದು ಹೋದಾಗ ಅಪರಿಚಿತ ವ್ಯಕ್ತಿಯೊಬ್ಬ ಪರಿಚಯಸ್ಥನಂತೆ ನಟಿಸಿ ಬಾಲಕನನ್ನು ಅಜ್ಜಿ ನೆಗೆ ಬಿಡುತ್ತೇನೆಂದು ಬೈಕ್‌ನಲ್ಲಿ ಕೂತುಕೊಳಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತು ಬಾಲಕನ ಮನೆ ಮಂದಿ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದರು. ಈ  ನಡುವೆ ತಲೆಮರೆಸಿಕೊಂಡಿದ್ದ ಆರೋಪಿ ವಿರುದ್ದ ಪೊಲೀಸರು ಆರೋಪಿ ವಿರುದ್ಧ ಕಲಂ ೩೬೩,೩೭೭,೫೦೬, ಐಪಿಸಿ ಕಲಂ ೫, ೬ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.
ಕಾಸರಗೋಡಿನಲ್ಲಿ ಆರೋಪಿ ಬಂಧನ:
ತನಿಖೆ ಕೈಗೆತ್ತಿಕೊಂಡ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ ಭಗವಾನ್ ಮತ್ತು ಅಪರ ಅಧೀಕ್ಷಕ ಕುಮಾರ ಚಂದ್ರ ಅವರ ಸೂಚನೆಯಂತೆ ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ ಕುಮಾರ್, ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಉಪಮೇಶ್ ಉಪ್ಪಳಿಕೆ, ಅವರ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ ಉದಯರವಿ, ಎ.ಎಸ್.ಐ ಶ್ರೀಧರ್ ರೈ, ಹೆಡ್‌ಕಾನ್‌ಸ್ಟೇಬಲ್ ಅದ್ರಾಮ, ಪ್ರವೀಣ್ ರೈ, ಪ್ರಶಾಂತ್, ಲೋಕೇಶ್, ಗಿರೀಶ್  ಅವರ ತಂಡ ತಲಮೆರೆಸಿಕೊಂಡಿದ್ದ ಆರೋಪಿ ಶ್ರಿಜಿತ್ ಅವರನ್ನು ಕಾಸರಗೋಡ್ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here