ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.14 ರಂದು ಶ್ರೀ ಕ್ಷೇತ್ರದಲ್ಲಿ ಸಂಕ್ರಮಣದ ಪ್ರಯುಕ್ತ ಕೋಲ ಹಾಗೂ ಅಗೇಲು ಸೇವೆ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಆರಂಭದಲ್ಲಿ ಅಗ್ನಿ ಕಲ್ಲುರ್ಟಿ ಕೆಂಡಸೇವೆಯಾಗಿ ಅಗ್ನಿ ಕಲ್ಲುರ್ಟಿ ಕೋಲ,ಬಳಿಕ ಸ್ವಾಮಿ ಕೊರಗಜ್ಜ ದೈವದ ಕೋಲ, ಅಗೇಲು ಸೇವೆ ನಡೆಯಿತು. ಕ್ಷೇತ್ರದಲ್ಲಿ ಪ್ರತಿ ತಿಂಗಳ ಸಂಕ್ರಮಣದ ರಾತ್ರಿ ದೈವಗಳಿಗೆ ಕೋಲ, ಅಗೇಲು ಸೇವೆ ನಡೆಯಿತು.