ಬೆಟ್ಟಂಪಾಡಿ ದೇವಾಲಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟದ ಪದಗ್ರಹಣ, ಧಾರ್ಮಿಕ ಸಭೆ

0

ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃ ದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ಮಹಾಲಿಂಗೇಶ್ವರ ದೇವಾಲಯ ಬೆಟ್ಟಂಪಾಡಿ ಇವರ ಆಶ್ರಯದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕಕ್ಕೂರು, ರೆಂಜ, ಚೂರಿಪದವು ಇವುಗಳ ಸಹಕಾರದೊಂದಿಗೆ ವೇದಮೂರ್ತಿ ರಾಧಾಕೃಷ್ಣ ಭಟ್ ಕಕ್ಕೂರು ಇವರ ನೇತೃತ್ವದಲ್ಲಿ 2 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಒಕ್ಕೂಟದ ಪದಗ್ರಹಣ ‌ಮೆ.15 ರಂದು ಬೆಟ್ಟಂಪಾಡಿ ದೇವಾಲಯದಲ್ಲಿ ನಡೆಯಿತು.
 ಬೆಳಿಗ್ಗೆ  ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಿ  ಮಹಾಪೂಜೆ ನಂತರ ಧಾರ್ಮಿಕ ಸಭೆ, ಒಕ್ಕೂಟದ ಪದಗ್ರಹಣ ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ಮತ್ತು ಶ್ರೀ ಶಾಂತದುರ್ಗಾ ಕುಣಿತ ಭಜನಾ ತಂಡ ನಿಡ್ಪಳ್ಳಿ ಇವರಿಂದ ಕುಣಿತ ಭಜನೆ ನಡೆಯಿತು.
 ಧಾರ್ಮಿಕ  ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ.ಡಿ ವಹಿಸಿದ್ದರು. ಬೆಟ್ಟಂಪಾಡಿ ದೇವಾಲಯದ ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು ದೀಪ ಬೆಳಗಿಸಿ ಉದ್ಘಾಟಿಸಿ ತೆಂಗಿನ ಹಿಂಗಾರ ಅರಳಿಸಿ ಧಾರ್ಮಿಕ ಭಾಷಣ ಮಾಡಿದರು. ಎಸ್.ಕೆ.ಡಿ.ಅರ್.ಡಿ.ಪಿ ತಾಲೂಕು ಯೋಜನಾಧಿಕಾರಿ ಆನಂದ, ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಶಿವಗಿರಿ ಬೀಡು, ಪುತ್ತೂರು ಜನಜಾಗೃತಿ ವೇದಿಕೆಯ ಸದಸ್ಯ ಜಗನ್ನಾಥ ರೈ ಕೊಮ್ಮಂಡ, ಬೆಟ್ಟಂಪಾಡಿ ವಲಯಾಧ್ಯಕ್ಷ ನವೀನ್ ಕುಮಾರ್ ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ವಲಯ ಮೆಲ್ವೀಚಾರಕ ಶಿವಪ್ಪ, ಸೇವಾ ಪ್ರತಿನಿಧಿಗಳು, ಪೂಜಾ ಸಮಿತಿ ಸದಸ್ಯರು, ಒಕ್ಕೂಟದ ಸದಸ್ಯರು ಸಹಕರಿಸಿದರು. 
 

LEAVE A REPLY

Please enter your comment!
Please enter your name here