![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
![](https://puttur.suddinews.com/wp-content/uploads/2022/05/IMG-20220516-WA0022.jpg)
ಬಡಗನ್ನೂರುಃ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕೈೂಲ ಬಡಗನ್ನೂರು ಇಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳನ್ನು ಬ್ಯಾಂಡ್ ವಾದ್ಯಗಳೊಂದಿಗೆ ಸಿಹಿ ವಿತರಿಸಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಬಳಿಕ ನಡೆದ ಪೋಷಕರ ಸಭೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಪುಷ್ಪವಾತಿ ಎಂಬಿ. ಕಲಿಕಾ ಚೇತರಿಕೆ ಕಾರ್ಯಕ್ರಮ, ಮಳೆ.ಬಿಲ್ಲು , ವಿದ್ಯಾಪ್ರವೇಶ ಬಗ್ಗೆ ಪ್ರಾಸ್ತವಿಕವಾಗಿ ಮಾಹಿತಿ ನೀಡಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಸುಂದರ ನಾಯ್ಕ ನೂತನವಾಗಿ ಒಂದನೇ ತರಗತಿಗೆ ಸೇರ್ಪಡೆ ಗೊಂಡ ಮಕ್ಕಳಿಗೆ ಹೂಗುಚ್ಚ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಅಕ್ಷರದಾಸೋಹ ಸಿಬ್ಬಂದಿ ಉಪಸ್ಥಿತರಿದ್ದರು. ಶಿಕ್ಷಕ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.