![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕಲ್ಪಣೆ ಸ.ಹಿ.ಪ್ರಾ.ಶಾಲೆಗೆ ನೂತನ ಮುಖ್ಯ ಗುರುಗಳಾಗಿ ಕರ್ತವ್ಯಕ್ಕೆ ಹಾಜರಾದ ಕಮಲ ಅವರಿಗೆ ಶಾಲೆಯ ವತಿಯಿಂದ ಸ್ವಾಗತ ಕಾರ್ಯಕ್ರಮ ಮೇ.16ರಂದು ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಎಸ್ಡಿಎಂಸಿ ಉಪಾಧ್ಯಕ್ಷೆ ಉಮಾವತಿ ಹಾಗೂ ಸದಸ್ಯರು, ಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.