ಪುತ್ತೂರು : 34 ನೆಕ್ಕಿಲಾಡಿ ಶಾಲೆಯಲ್ಲಿ ಹೊಸದಾಗಿ 1ನೇ ತರಗತಿಗೆ ದಾಖಲಾದ ಮಕ್ಕಳನ್ನು ಹಿರಿಯ ವಿದ್ಯಾರ್ಥಿಗಳು ಬ್ಯಾಂಡ್ ವಾದನದೊಂದಿಗೆ ಆರತಿ ಬೆಳಗುವುದರ ಮೂಲಕ ಹೂ ಮತ್ತು ಪನ್ನಿರನ್ನು ಸಿಂಪಡಿಸಿ ಸ್ವಾಗತಿಸಿ ಶಾಲಾ ಸಭಾಂಗಣಕ್ಕೆ ಕರೆತರಲಾಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. 1ನೇ ತರಗತಿಯ ಪುಟಾಣಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹೊಸದಾಗಿ ಆಗಮಿಸಿದ ಶಾಲಾ ಮುಖ್ಯಗುರುಗಳಿಗೆ ಹೂ ಹಾರ ಹಾಕಿ ಗುಲಾಬಿ ನೀಡಿ ಸ್ವಾಗತಿಸಲಾಯಿತು. ನಮ್ಮೂರು ನೆಕ್ಕಿಲಾಡಿ ಸಂಸ್ಥೆಯ ಅಧ್ಯಕ್ಷ ಜತೀಂದ್ರ ಶೆಟ್ಟಿ ಮಾತನಾಡಿ ಶುಭಹಾರೈಸಿದರು. ೩೪ ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಮಾತನಾಡಿ ಶೈಕ್ಷಣಿಕ ವರ್ಷದ ಏಳಿಗೆಗೆ ನಾವೆಲ್ಲರೂ ಸಹಕರಿಸೋಣ ಎಂದು ಶುಭ ಹಾರೈಸಿದರು. ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಮಾತನಾಡಿ ಶುಬಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ಧರ್ಣಪ್ಪ ಗೌಡರವರು ಮಾತನಾಡಿ ಶುಭ ಹಾರೈಸಿದರು. ಎಸ್ಡಿಎಂಸಿ ಉಪಾಧ್ಯಕ್ಷರು, ಸದಸ್ಯರು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಪೋಷಕರು, ಅಡುಗೆ ಸಿಬ್ಬಂದಿಗಳು, ಉಪಸ್ಥಿತರಿದ್ದರು. ಮುಖ್ಯ ಗುರು ರುಕ್ಮಿಣಿ ಮಧ್ಯಾಹ್ನದ ಊಟದ ಪ್ರಾಯೋಜಕತ್ವ ವಹಿಸಿದ್ದರು.
ಶಾಲಾ ಮುಖ್ಯಗುರು ರುಕ್ಮಿಣಿ ಡಿ. ಸ್ವಾಗತಿಸಿ ಪದ್ಮ ವಂದಿಸಿದರು. ಕಾವೇರಿ ಸಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.